ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆರಂಭಿಸಲಾದ ತುರ್ತು ಸಾಲ ಖಾತ್ರಿ ಯೋಜನೆ (ECLGS) 13.5 ಲಕ್ಷ ಎಂಎಸ್ಎಂಇ ಮತ್ತು 1.5 ಕೋಟಿ ಉದ್ಯೋಗಗಳನ್ನು ಉಳಿಸಿದೆ ಎಂಬುದನ್ನು ಬಹಿರಂಗಪಡಿಸಿದ ಅಧ್ಯಯನವೊಂದನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಹಂಚಿಕೊಂಡು ಶ್ಲಾಘಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಸಾಂಕ್ರಾಮಿಕ ಸಮಯದಲ್ಲಿ ತುರ್ತು ಸಾಲ ಖಾತ್ರಿ ಯೋಜನೆ 13.5 ಲಕ್ಷ ಎಂಎಸ್ಎಂಇಗಳನ್ನು ಮತ್ತು 1.5 ಕೋಟಿ ಉದ್ಯೋಗಗಳನ್ನು ಹೇಗೆ ಉಳಿಸಿದೆ ಎಂಬುದನ್ನು ತೋರಿಸುವ ಉತ್ತಮ ಅಧ್ಯಯನ. ನಮ್ಮ ಸಣ್ಣ ಉದ್ಯಮಗಳು ಅಭಿವೃದ್ಧಿ ಹೊಂದಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದನ್ನು ನಾವು ಮುಂದುವರಿಸುತ್ತೇವೆ” ಎಂದಿದ್ದಾರೆ.
ಹಣಕಾಸು ಸಚಿವಾಲಯವು ಮೇ 2020 ರಲ್ಲಿ ಘೋಷಿಸಿದ ರೂ 20 ಲಕ್ಷ ಕೋಟಿಯ ಸಮಗ್ರ ಪ್ಯಾಕೇಜ್ನ ಭಾಗವಾಗಿ ತುರ್ತು ಸಾಲ ಖಾತ್ರಿ ಯೋಜನೆಯನ್ನು ಅನಾವರಣಗೊಳಿಸಲಾಗಿದೆ, ಇದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ವಲಯದಲ್ಲಿ ಕೋವಿಡ್ ಕಾರಣದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟದ ದೃಷ್ಟಿಯಿಂದ ಸಹಾಯ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.