ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಧಾಮದ ಪ್ರತಿ ಕಾರ್ಯದಲ್ಲೂ ತಮ್ಮನ್ನು ತಾವು ಆಳವಾಗಿ ತೊಡಗಿಸಿಕೊಂಡಿದ್ದಾರೆ ಮತ್ತು ವಾರಣಾಸಿಯ ಎಲ್ಲಾ ಸಮಸ್ಯೆಗಳು ಮತ್ತು ಬೆಳವಣಿಗೆಗಳ ಮೇಲೆ ನಿಗಾ ಇಡುತ್ತಿದ್ದಾರೆ.
ದೇವಾಲಯದ ಆವರಣದಲ್ಲಿ ಚರ್ಮ ಅಥವಾ ರಬ್ಬರ್ನಿಂದ ತಯಾರಿಸಿದ ಪಾದರಕ್ಷೆಗಳನ್ನು ಧರಿಸುವುದನ್ನು ನಿಷೇಧಿಸಿರುವುದರಿಂದ ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ತಮ್ಮ ಕರ್ತವ್ಯವನ್ನು ಬರಿಗಾಲಿನಲ್ಲಿ ನಿರ್ವಹಿಸುತ್ತಿದ್ದಾರೆ ಎಂಬ ಅಂಶ ಇತ್ತೀಚೆಗೆ ಮೋದಿಯವರ ಗಮನಕ್ಕೆ ಬಂದಿದೆ. ಇವರಲ್ಲಿ ಅರ್ಚಕರು, ಸೇವೆ ಮಾಡುವ ಜನರು, ಭದ್ರತಾ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರರು ಸೇರಿದ್ದಾರೆ.
ಹೀಗಾಗಿ ಮೋದಿ 100 ಜೋಡಿ ಸೆಣಬಿನ ಪಾದರಕ್ಷೆಗಳನ್ನು ಖರೀದಿಸಿ ಕಾಶಿ ವಿಶ್ವನಾಥ ಧಾಮಕ್ಕೆ ಕಳುಹಿಸಿದ್ದಾರೆ, ಇದರಿಂದಾಗಿ ಇನ್ನು ಮುಂದೆ ಕಾಶಿ ಧಾಮದಲ್ಲಿ ಕರ್ತವ್ಯಗಳನ್ನು ನಿರ್ವಹಿಸುವವರು ಚಳಿಯಲ್ಲಿ ಬರಿಗಾಲಿನಲ್ಲಿ ಇರಬೇಕಾಗಿಲ್ಲ.
ಮೋದಿ ನೀಡಿದ ಉಡುಗೊರೆ ನೋಡಿ ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸ ಮಾಡುವ ಜನರು ತುಂಬಾ ಸಂತೋಷಪಟ್ಟಿದ್ದಾರೆ.
ಪ್ರಧಾನಿಯವರ ಶ್ರದ್ಧೆ ಮತ್ತು ಬಡವರ ಬಗ್ಗೆ ಅವರ ಕಾಳಜಿಗೆ ಇದು ಮತ್ತೊಂದು ಉದಾಹರಣೆಯಾಗಿದೆ.
Varanasi, UP | PM Narendra Modi sends 100 pairs of jute footwear for the workers at 'Kashi Vishwanath Dham' after finding out that most of them worked bare-footed because it is forbidden to wear leather or rubber footwear in the temple premises: GoI sources pic.twitter.com/BawTJQHYUP
— ANI UP/Uttarakhand (@ANINewsUP) January 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.