ಬೆಂಗಳೂರು : ಕೋವಿಡ್ ಸೋಂಕಿನಿಂದ ಕರ್ನಾಟಕವನ್ನು ಸುರಕ್ಷತಾ ಚಕ್ರದೊಳಗೆ ತರುವುದೇ ನಮ್ಮ ಸರ್ಕಾರದ ಗುರಿ. ಈ ಗುರಿ ಸಾಧಿಸುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರ್ನಾಟಕದಲ್ಲಿ ಲಸಿಕೆ ಕಾರ್ಯಕ್ರಮವನ್ನು ಶೇ.99 ರಷ್ಟು ಯಶಸ್ವಿಗೊಳಿಸಲಾಗಿದೆ. ಜನವರಿ 31 ರೊಳಗೆ ಶೇ.100 ರಷ್ಟು ಸಾಧನೆ ಮಾಡಲಾಗುವುದು. ಶೇ.77 ರಷ್ಟು ಎರಡನೇ ಡೋಸ್ ಆಗಿದ್ದು, ಜನವರಿ ಅಂತ್ಯಕ್ಕೆ ಶೇ.80 % ಸಾಧಿಸುವ ಗುರಿ ಇದ್ದು, ಫೆಬ್ರವರಿಯಲ್ಲಿ ಎರಡನೇ ಡೋಸ್ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯವನ್ನು ಸುರಕ್ಷತಾ ಚಕ್ರದೊಳಗೆ ತರಬೇಕೆನ್ನುವ ಸರ್ಕಾರದ ಗುರಿಯನ್ನು ಮುಟ್ಟಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮುಖ್ಯಮಂತ್ರಿ @BSBommai ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. (1/2)#KarnatakaFightsCorona #LargestVaccineDrive #Unite2FightCorona pic.twitter.com/1iEgaduNHu
— CM of Karnataka (@CMofKarnataka) January 10, 2022
ಕರೋನಾ ಯೋಧರು ದೇಶದ ನಿಜವಾದ ರಕ್ಷಕರು:
ಕರೋನಾ ಯೋಧರು ದೇಶದ ನಿಜವಾದ ರಕ್ಷಕರಾಗಿದ್ದಾರೆ. ಯೋಧರು ದೇಶವನ್ನು ರಕ್ಷಿಸುವಂತೆ ಕರೋನಾ ಯೋಧರು ದೇಶದ ಪ್ರತಿಯೊಂದು ಕುಟುಂಬವನ್ನು ರಕ್ಷಿಸುತ್ತಿದ್ದಾರೆ ಎಂದು ತಿಳಿಸಿದರು.
ಕರ್ತವ್ಯ ನಿರ್ವಹಿಸುವಾಗ ಹಲವಾರು ತೊಂದರೆಗಳನ್ನು ಎದುರಿಸಿದರೂ, ಅವುಗಳನ್ನು ಲೆಕ್ಕಿಸದೇ ಆಶಾ ಕಾರ್ಯಕರ್ತರು, ವೈದರು, ನರ್ಸ್ಗಳೂ ಸೇರಿದಂತೆ ಮುಂಚೂಣಿ ಕಾರ್ಯಕರ್ತರು ಅಮೋಘ ಸೇವೆ ಸಲ್ಲಿಸುತ್ತಿದ್ದು, ದೇಶದ ನಿಜವಾದ ರಕ್ಷಕರಾಗಿದ್ದಾರೆ ಎಂದು ಮುಖ್ಯಮಂತ್ರಿಗಳು ಪ್ರಶಂಸಿದರು.
ಇಡೀ ವಿಶ್ವದಲ್ಲಿ ಕೋವಿಡ್ನಿಂದ ರಕ್ಷಣೆ ಪಡೆಯಲು ಲಸಿಕೆಯೊಂದೇ ದಾರಿ. ಪ್ರಾರಂಭದಲ್ಲಿ ಕೆಲವೊಂದು ದೇಶಗಳು ಲಸಿಕೆಯ ಬಗ್ಗೆ ಹಗುರವಾದ ಭಾವ ತಾಳಿದ್ದರಿಂದ ಕೋವಿಡ್ ನ ಎರಡು ಹಾಗೂ ಮೂರನೇ ಅಲೆ ಹೆಚ್ಚಳವಾಯಿತು. ಈಗ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್ ಲಸಿಕೆಯನ್ನು ಕಡ್ಡಾಯಗೊಳಿಸಿದ್ದಾರೆ. ಅಮೆರಿಕಾದ ಮೂರುಪಟ್ಟು ಲಸಿಕೆಗಳನ್ನು ಭಾರತ ದೇಶದಲ್ಲಿ ನೀಡಲಾಗಿದೆ. ಅಮೇರಿಕಾದಂತಹ ಆಧುನಿಕ, ಮುಂದುವರೆದ ದೇಶವಾದರೂ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಲಿಲ್ಲ. ದೇಶದಲ್ಲಿ 130 ಕೋಟಿ ಜನಸಂಖ್ಯೆ ಇದೆ. ಭಾರತದಲ್ಲಿಯೇ ತಯಾರಾದ ಕೋವಿಡ್ ಲಸಿಕೆ ಉತ್ತಮ ಗುಣಮಟ್ಟದ್ದಾಗಿದ್ದು, ಯಶಸ್ವಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಭಾರತದ ಪ್ರಧಾನಮಂತ್ರಿಗಳ ನಾಯಕತ್ವ, ಅವರ ವಿಶ್ವಾಸರ್ಹತೆ ಹಾಗೂ ಕೋವಿಡ್ ಮುಂಚೂಣಿ ಕಾರ್ಯಕರ್ತರು ಪ್ರಮುಖ ಕಾರಣ ಎಂದು ತಿಳಿಸಿದರು.
ಯಾವುದೇ ಕ್ರಾಂತಿಕಾರಿ ನಿರ್ಣಯಗಳು, ವಿನೂತನ ಕಾರ್ಯಕ್ರಮಗಳಿಗೆ ಸಹಜವಾಗಿ ವಿರೋಧವಿರುತ್ತದೆ. ದೇಶದಲ್ಲಿ ಲಸಿಕೆ ಬಗ್ಗೆ ಬಹಳಷ್ಟು ಪರ ವಿರೋಧ ಚರ್ಚೆಗಳಾದವು. ಯಾವುದೇ ಲಸಿಕೆ ಸೂಕ್ತ ಪರೀಕ್ಷೆಗಳು, ಪ್ರಯೋಗಗಳು, ನಿಖರತೆಗಳನ್ನು ದೃಢಪಡಿಸಿಕೊಂಡ ನಂತರವೇ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗುತ್ತದೆ. ಪ್ರಾರಂಭದಲ್ಲಿ ಲಸಿಕೆ ನೀಡಿಕೆಗೆ ಹಾಗೂ ಪರೀಕ್ಷೆಗೆ ಒಳಪಡಲು ವಿರೋಧ ವ್ಯಕ್ತವಾಯಿತು. ಕೋವಿಡ್ಗೆ ಯಾವುದೇ ಜಾತಿ ಬೇಧವಿಲ್ಲ. ನಮ್ಮಿಂದ ಬೇರೆಯವರಿಗೆ ತೊಂದರೆಯಾಗಬಾರದೆಂಬ ಭಾವನೆಯಿಂದ ಆರೋಗ್ಯ ಕಾರ್ಯಕರ್ತರಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.