ಬೆಂಗಳೂರು : ಪ್ರತಿ ವರ್ಷ ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆಯ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡಗಳನ್ನು ನಿಗದಿಪಡಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಆಡಳಿತ ಸುಧಾರಣೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ‘ನಿರ್ಧಾರ ಕೈಗೊಳ್ಳುವ ಹಂತಗಳು ಕಡಿಮೆ ಆಗಿ ವಿಳಂಬವಿಲ್ಲದೆ ಜನರಿಗೆ ಸುಲಭವಾಗಿ ಸೌಲಭ್ಯಗಳು ದೊರಕುವಂತಾಗಬೇಕು. ಜನರ ಅರ್ಜಿಗಳಿಗೆ ಕೆಲವೇ ಗಂಟೆಗಳಲ್ಲಿ ಉತ್ತರಿಸುವಂತಿರಬೇಕು. ಅತ್ಯಂತ ಕೆಳಮಟ್ಟದಲ್ಲಿ ಹಾಗೂ ಮೇಲ್ಮಟ್ಟದಲ್ಲಿ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಕಂದಾಯ ಇಲಾಖೆಯ ಕೆಲವು ಹೊಣೆಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಬೇಕು’ ಎಂದರು.
ಜಂಟಿ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳನ್ನು ಸಬಲಗೊಳಿಸಬೇಕು. ಪ್ರಾದೇಶಿಕ ಆಯುಕ್ತರಿಗೆ ಬೃಹತ್ ನೀರಾವರಿ, ಭೂ ಸ್ವಾಧೀನ ಮುಂತಾದ ವಿಷಯಗಳನ್ನು ನಿರ್ವಹಿಸಬೇಕು. ಕಂದಾಯ ಇಲಾಖೆಯ ಸುಧಾರಣೆಯಾದರೆ ಶೇ. 40 ರಷ್ಟು ಸರ್ಕಾರಿ ಕೆಲಸ ಕಡಿಮೆಯಾದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ನೀರಾವರಿ, ಲೋಕೋಪಯೋಗಿ ಮುಂತಾದ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕು. ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಯೋಜನೆಗಳಿಂದ ರಾಜ್ಯಕ್ಕೆ ಅತಿ ಹೆಚ್ಚಿನ ನಷ್ಟ ಉಂಟಾಗುತ್ತಿದೆ ಎಂದರು.
ಕಾಯ್ದೆಗಳಲ್ಲಿ ಬದಲಾವಣೆ, ಪುನಾರಾವರ್ತಿತ ಕಾಯ್ದೆಗಳನ್ನು ಗುರುತಿಸುವ ಕೆಲಸವೂ ಆಗಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು. ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದರೂ ಬಳಕೆಯಾಗದ ಮೊತ್ತ ಬ್ಯಾಂಕ್ ಖಾತೆಗಳಲ್ಲಿ ಉಳಿದುಕೊಂಡಿದ್ದು, ಈ ಮೊತ್ತವನ್ನು ಕ್ಲಿಯರ್ ಮಾಡಲು ಕ್ರಮ ಕೈಗೊಳ್ಳಲು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.