ನವದೆಹಲಿ: ಆಯುಷ್ ಸಚಿವಾಲಯವು ಜನವರಿ 14ರ ಮಕರ ಸಂಕ್ರಾಂತಿಯಂದು ಜಾಗತಿಕವಾಗಿ 75 ಲಕ್ಷ ಜನರಿಗೆ ಜಾಗತಿಕ ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಆರೋಗ್ಯ, ಸಂಪತ್ತು ಮತ್ತು ಸಂತೋಷವನ್ನು ದಯಪಾಲಿಸಿದ್ದಕ್ಕಾಗಿ ಪ್ರಕೃತಿ ಮಾತೆಗೆ ಕೃತಜ್ಞತೆಯನ್ನು ಅರ್ಪಣೆ ಮಾಡಲಾಗುತ್ತದೆ.
ಈ ದಿನ ಸೂರ್ಯನಿಗೆ ನಮನವಾಗಿ ‘ಸೂರ್ಯ ನಮಸ್ಕಾರ’ವನ್ನು ಅರ್ಪಿಸಲಾಗುತ್ತದೆ, ಎಲ್ಲಾ ಜೀವಿಗಳನ್ನು ಪೋಷಿಸುವ ಸೂರ್ಯನ ಒಂದೊಂದು ಕಿರಣಗಳಿಗೂ ಕೃತಜ್ಞತೆಯನ್ನು ಈ ಮೂಲಕ ಸಲ್ಲಿಸಲಾಗುತ್ತದೆ. ಶಕ್ತಿಯ ಪ್ರಾಥಮಿಕ ಮೂಲವಾಗಿರುವ ಸೂರ್ಯನು ಆಹಾರ ಸರಪಳಿಯ ಮುಂದುವರಿಕೆಗೆ ಮಾತ್ರವಲ್ಲದೆ ಮಾನವನ ಮನಸ್ಸು ಮತ್ತು ದೇಹವನ್ನು ಶಕ್ತಿಯುತಗೊಳಿಸುತ್ತಾನೆ.
ವೈಜ್ಞಾನಿಕವಾಗಿ, ಸೂರ್ಯ ನಮಸ್ಕಾರವು ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಚೈತನ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿದುಬಂದಿದೆ, ಇದು ಸಾಂಕ್ರಾಮಿಕದ ಈ ಸನ್ನಿವೇಶದಲ್ಲಿ ನಮ್ಮ ಆರೋಗ್ಯಕ್ಕೆ ಮಹತ್ವದ್ದಾಗಿದೆ. ಸೂರ್ಯನಿಗೆ ಒಡ್ಡಿಕೊಳ್ಳುವುದರಿಂದ ಮಾನವನ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆ.
ಸಾಮೂಹಿಕ ಸೂರ್ಯ ನಮಸ್ಕಾರ ಪ್ರದರ್ಶನವು ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸಂದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಉದ್ದೇಶವನ್ನು ಹೊಂದಿದೆ. ಹವಾಮಾನ ಪ್ರಜ್ಞೆಯು ಅತ್ಯಗತ್ಯವಾಗಿರುವ ಇಂದಿನ ಜಗತ್ತಿನಲ್ಲಿ, ದೈನಂದಿನ ಜೀವನದಲ್ಲಿ ಸೌರ ಶಕ್ತಿಯ ಅನುಷ್ಠಾನವು ಭೂಮಿಗೆ ಬೆದರಿಕೆಯಾಗಿರುವ ಇಂಗಾಲದ ಹೊರಸೂಸುವಿಕೆಯನ್ನು ಬಹಳವಾಗಿ ಕಡಿಮೆ ಮಾಡುತ್ತದೆ.
ಇದಲ್ಲದೆ, ಕಾರ್ಯಕ್ರಮ ನಮ್ಮ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯಲ್ಲಿ ಮಕರ ಸಕ್ರಾಂತಿಯ ಮಹತ್ವವನ್ನು ಒತ್ತಿಹೇಳುತ್ತದೆ. ಸೂರ್ಯ ನಮಸ್ಕಾರವು ದೇಹ ಮತ್ತು ಮನಸ್ಸಿನ ಸಮನ್ವಯದೊಂದಿಗೆ 12 ಹಂತಗಳಲ್ಲಿ ನಿರ್ವಹಿಸಲಾದ 8 ಆಸನಗಳ ಗುಂಪಾಗಿದೆ. ಇದನ್ನು ಮುಂಜಾನೆ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.