ಬೆಂಗಳೂರು: ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಸೇರಿದಂತೆ ಸುಮಾರು 41 ಕರ್ನಾಟಕ ಕಾಂಗ್ರೆಸ್ ನಾಯಕರ ಮೇಲೆ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಮೇಕೆ ದಾಟು ಯೋಜನೆ ಜಾರಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ನಡೆಸುತ್ತಿರುವ ಶಿವಕುಮಾರ್ ವಿರುದ್ಧ ಎರಡು ದಿನಗಳಲ್ಲಿ ದಾಖಲಾದ ಎರಡನೇ ಎಫ್ಐಆರ್ ಇದಾಗಿದೆ.
ಕೊರೋನಾವೈರಸ್ ರೋಗಲಕ್ಷಣಗಳು ಅವರಿಗೆ ಕಂಡು ಬಂದಿದ್ದರೂ ಕೂಡ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದ ನಂತರ ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಜನರ ಕೆಂಗಣ್ಣಿಗೆ ಒಳಗಾಗಿದ್ದಾರೆ. ಅವರು ಇತರರ ಪ್ರಾಣವನ್ನು ಕೂಡ ಅಪಾಯಕ್ಕೆ ದೂಡುತ್ತಿದ್ದಾರೆ. ಮಾಸ್ಕ್ ಇಲ್ಲದೆಯೇ ಮಕ್ಕಳ ಜೊತೆಗೂಡುತ್ತಿದ್ದಾರೆ.
‘ನಮ್ಮ ನೀರು, ನಮ್ಮ ಹಕ್ಕು,’ ಎಂಬ ಶೀರ್ಷಿಕೆಯಡಿ 10 ದಿನಗಳ ಪಾದಯಾತ್ರೆಯನ್ನು ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದಾರೆ. ಶಿವಕುಮಾರ್ ಮಂಗಳವಾರವೂ ಪಾದಯಾತ್ರೆ ಮುಂದುವರಿಸಿದ್ದು, ಸಾಥ್ನೂರಿನಲ್ಲಿ ಡೋಲು ನಾದದೊಂದಿಗೆ ಮಾಸ್ಕ್ ರಹಿತವಾಗಿ ಮೆರವಣಿಗೆ ನಡೆಸಿದ್ದಾರೆ. ಸಾವಿರಾರು ಕಾರ್ಯಕರ್ತರು ಈ ವೇಳೆ ಸೇರಿದ್ದರು. ಕಳೆದ ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಇಂದು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.