ನವದೆಹಲಿ: ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ಭದ್ರತಾ ಉಲ್ಲಂಘನೆ ಪ್ರಕರಣದ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಇಂದು ಐವರು ಸದಸ್ಯರ ಸಮಿತಿಯನ್ನು ನೇಮಿಸಿದೆ.
ಈ ವಿಷಯದ ಬಗ್ಗೆ ಅಸ್ತಿತ್ವದಲ್ಲಿರುವ ಎಲ್ಲಾ ವಿಚಾರಣೆಗಳನ್ನು ತಡೆಹಿಡಿದಿರುವ ಸುಪ್ರೀಂಕೋರ್ಟ್ ಐದು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಘೋಷಿಸಿತ್ತು. ಅದರಂತೆ ಸಮಿತಿಯನ್ನು ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರು ಪ್ರಧಾನಿ ಮೋದಿಯವರ ಭದ್ರತೆಯಲ್ಲಿನ ಲೋಪಗಳ ಬಗ್ಗೆ ತನಿಖೆ ನಡೆಸುವ ಸಮಿತಿಯ ಮುಖ್ಯಸ್ಥರಾಗಿರಲಿದ್ದಾರೆ.
ಎನ್ಐಎ ಮಹಾನಿರ್ದೇಶಕರು, ಚಂಡೀಗಢ ಪೊಲೀಸ್ ಮುಖ್ಯಸ್ಥರು, ಪಂಜಾಬ್ ಪೊಲೀಸ್ (ಭದ್ರತೆ) ಹೆಚ್ಚುವರಿ ಮಹಾನಿರ್ದೇಶಕರು ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ವಿಚಾರಣೆಯ ಸದಸ್ಯರಾಗಿರುತ್ತಾರೆ.
ಸಮಿತಿಯು ಆದಷ್ಟು ಬೇಗ ವರದಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಹೇಳಿದ್ದಾರೆ.
ಸಮಿತಿಯು ಉಲ್ಲಂಘನೆಗೆ ಕಾರಣವೇನು, ಯಾರು ಹೊಣೆಗಾರರು ಮತ್ತು ಭವಿಷ್ಯದಲ್ಲಿ ಇಂತಹ ಲೋಪಗಳನ್ನು ತಡೆಗಟ್ಟಲು ಯಾವ ರಕ್ಷಣಾತ್ಮಕ ಕ್ರಮಗಳ ಅಗತ್ಯವಿದೆ ಎಂಬುದರ ಕುರಿತು ತನಿಖೆ ನಡೆಸಲಿದೆ ಮತ್ತು ಅದರ ವರದಿಯನ್ನು ಆದಷ್ಟು ಬೇಗ ಸಲ್ಲಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.