ತಿರುವನಂತಪುರಂ: ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಕಾಲಡಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಶೀಘ್ರದಲ್ಲಿ ಘೋಷಣೆ ಮಾಡುತ್ತೇವೆ ಎಂದು ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರದ ಮುಖ್ಯಸ್ಥ ತರುಣ್ ವಿಜಯ್ ಅವರು ತಿಳಿಸಿದ್ದಾರೆ.
ಕೇರಳದ ಕಾಲಡಿಗೆ ಭೇಟಿ ನೀಡಿದ ವಿಜಯ್, ಇತಿಹಾಸದಲ್ಲಿ ಆದ ಹಲವಾರು ತಪ್ಪುಗಳನ್ನು ತೊಡೆದು ಹಾಕಲು ಪ್ರಧಾನಿ ನರೇಂದ್ರ ಮೋದಿ ಬದ್ಧತೆ ತೋರಿಸುತ್ತಿದ್ದಾರೆ. ಪ್ರಧಾನಿಯವರ ನಿರ್ದೇಶನದಂತೆ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ ಅವರು ರುದ್ರಾಕ್ಷಿಯ ಸಸಿಗಳನ್ನು ಶಂಕರಾಚಾರ್ಯರ ದೇವಾಲಯದ ನೆಟ್ಟಿದ್ದಾರೆ.
ಕಾಲಡಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಸ್ತೃತವಾದ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆದಿ ಶಂಕರಾಚಾರ್ಯರು ದೇಶಾದ್ಯಂತ ಸಂಚರಿಸಿ ಅದ್ವೈತ ಮತವನ್ನು ಪ್ರಚಾರ ಮಾಡಿದರು. ಹೀಗಾಗಿ ಎಂಟನೇ ಶತಮಾನದಿಂದ ಇತಿಹಾಸ ಹೊಂದಿರುವ ಕಾಲಡಿಗೆ ರಾಷ್ಟ್ರೀಯ ಪ್ರಾಮುಖ್ಯತೆ ಇದೆ.
ಶಂಕರಾಚಾರ್ಯರು ದೇಶದ ಹಲವೆಡೆ ದೇಗುಲಗಳನ್ನು ನಿರ್ಮಾಣ ಮಾಡಿದ್ದಾರೆ. ದೇಶದ ನಾಲ್ಕು ದಿಕ್ಕುಗಳಲ್ಲಿ ಅಮ್ನಾಯ ಪೀಠಗಳನ್ನು ಸ್ಥಾಪಿಸಿದ್ದಾರೆ. ಹೀಗಾಗಿ ಕಾಲಡಿಯನ್ನು ರಾಷ್ಟ್ರೀಯ ಸ್ಮಾರಕದ ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ ಎಂದು ತರುಣ್ ವಿಜಯ್ ಹೇಳಿದ್ದಾರೆ.
ಆದಿ ಶಂಕರಾಚಾರ್ಯರ ಜನ್ಮ ದಿನವನ್ನು ಈಗಾಗಲೇ ಕೇಂದ್ರ ಸರಕಾರವು ತತ್ವಜ್ಞಾನಿಗಳ ದಿನವೆಂದು ಆಚರಣೆ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.