ನವದೆಹಲಿ: ಭಾರತವು ಎರಡು ಅಪರಿಮಿತ ಶಕ್ತಿಯನ್ನು ಹೊಂದಿದೆ ಎಂದು ಜಗತ್ತು ಒಪ್ಪಿಕೊಂಡಿದೆ. ಅದೆಂದರೆ ಜನಸಂಖ್ಯೆ ಮತ್ತು ಪ್ರಜಾಪ್ರಭುತ್ವ. ಭಾರತದ ಯುವಕರು ಜನಸಂಖ್ಯಾ ಲಾಭಾಂಶಗಳ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೊಂದಿದ್ದಾರೆ. ಭಾರತವು ತನ್ನ ಯುವಕರನ್ನು ಅಭಿವೃದ್ಧಿಯ ಚಾಲಕರು ಎಂದು ಪರಿಗಣಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಪುದುಚೇರಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಯುವ ದಿನದ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಿದ ಅವರು, 2022 ರ ವರ್ಷವು ಭಾರತದ ಯುವಕರಿಗೆ ಬಹಳ ಮುಖ್ಯವಾಗಿದೆ. ಇಂದಿನ ಯುವಕರು ದೇಶಕ್ಕಾಗಿ ಬದುಕಬೇಕು ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಬೇಕು. ಯುವಕರ ಶಕ್ತಿ ಭಾರತವನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದಿದ್ದಾರೆ.
ಇಂದು, ಭಾರತವು 50,000 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳ ಪ್ರಬಲ ಪರಿಸರ ವ್ಯವಸ್ಥೆಯನ್ನು ಹೊಂದಿದೆ, ಅದರಲ್ಲಿ 10,000 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳನ್ನು ಕಳೆದ 6-7 ತಿಂಗಳುಗಳಲ್ಲಿ ಕೋವಿಡ್ ಸಾಂಕ್ರಾಮಿಕವು ಒಡ್ಡಿದ ಸವಾಲುಗಳ ಮಧ್ಯೆ ಸ್ಥಾಪನೆಗೊಂಡಿವೆ. ‘ಸ್ಪರ್ಧಿಸಿ ಮತ್ತು ಜಯಿಸಿ’ ಎಂಬುದು ನಬ ಭಾರತದ ಮಂತ್ರವಾಗಬೇಕು ಎಂದಿದ್ದಾರೆ.
ಇಂದಿನ ಯುವಜನತೆ ‘ಮಾಡಬಲ್ಲೆ ಎಂಬ ಮನೋಭಾವನೆಯನ್ನು ಹೊಂದಿದ್ದು, ಅದು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ. ಡಿಜಿಟಲ್ ಪಾವತಿಯಲ್ಲಿ ಭಾರತ ಹೆಚ್ಚು ಮುನ್ನಡೆದಿರುವುದು ಯುವಕರ ಶಕ್ತಿಯಾಗಿದೆ. ಇಂದು ಭಾರತದ ಯುವಕರು ಜಾಗತಿಕ ಸಮೃದ್ಧಿಯ ತರುತ್ತಿದ್ದಾರೆ ಎಂದಿದ್ದಾರೆ.
ಪ್ರತಿ ವರ್ಷ ಜನವರಿ 12ರಂದು ಸ್ವಾಮಿ ವಿವೇಕಾನಂದರ ಜನ್ಮದಿನದಂದು ರಾಷ್ಟ್ರೀಯ ಯುವ ದಿನವನ್ನು ಆಚರಣೆ ಮಾಡಲಾಗುತ್ತದೆ.
The year 2022 is very important for the youth of India. Today's youth has to live for the country and fulfill the dreams of our freedom fighters… The strength of the youth will take India to greater heights: PM Modi addressing a National Youth Day programme pic.twitter.com/ic3pAb9dcl
— ANI (@ANI) January 12, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.