ಬೆಂಗಳೂರು: ದೇಶ ಕಂಡ ಮಹಾನ್ ಸಂತ, ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕದಲ್ಲಿ ಇಂದಿನಿಂದ ಜನವರಿ 18ರವರೆಗೆ ರಾಜ್ಯ ಯುವ ಸಪ್ತಾಹ-2022 ಅನ್ನು ಹಮ್ಮಿಕೊಳ್ಳಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಒಂದು ವಾರಗಳ ಕಾಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಮುದಾಯಕ್ಕೆ ನೆರವಾಗುವ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ.
ಏಳು ದಿನಗಳ ಕಾರ್ಯಕ್ರಮಗಳಲ್ಲಿ ರಾಜ್ಯದ 2 ಕೋಟಿ ಯುವ ಜನರನ್ನು ತಲುಪುವ ಗುರಿ ಹೊಂದಲಾಗಿದೆ.
ಸಪ್ತಾಹದ ಪ್ರಯುಕ್ತ ಜನವರಿ 12ರಂದು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಯುವ ಸಂಸತ್, ಯುವ ಗ್ರಾಮ ಸಭೆ ಮತ್ತು ಯುವ ವಾರ್ಡ್ ಸಭೆ ನಡೆಯಲಿದೆ.
ಜನವರಿ 13ರಂದು ಸ್ವಾಮಿ ವಿವೇಕಾನಂದರ ವಿಚಾರಧಾರೆ, ಆಶಯಗಳ ಕುರಿತು ಕಾರ್ಯಕ್ರಮ ನಡೆಯಲಿದೆ.
ಜನವರಿ 14ರಂದು ಪೌಷ್ಟಿಕಾಂಶ ಮತ್ತು ಆರೋಗ್ಯ ಶಿಬಿರ, ರಸ್ತೆ ಸುರಕ್ಷತೆ ಕುರಿತು ಯುವಜಾಗೃತಿ ನಡೆಯಲಿದೆ.
ಜನವರಿ 15ರಂದು ಸ್ಥಳೀಯ ಗ್ರಾಮೀಣ ಕ್ರೀಡಾ ಉತ್ಸವ ನಡೆಯಲಿದೆ.
ಜನವರಿ 16ರಂದು ಮಾದಕ ವ್ಯಸನ, ಮಹಿಳಾ ದೌರ್ಜನ್ಯ ಮತ್ತು ಸೈಬರ್ ಅಪರಾಧ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.
ಜನವರಿ 17ರಂದು ಕಾನೂನು ನೆರವು ಸೇವೆಗಳ ಬಗ್ಗೆ ಯುವ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಜನವರಿ 18ರಂದು ಘನತ್ಯಾಜ್ಯ ನಿರ್ವಹಣೆ ತಂತ್ರಜ್ಞಾನ, ಉದ್ಯಮಶೀಲರ ಅಭಿವೃದ್ಧಿ ಮತ್ತು ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.