ನವದೆಹಲಿ: ಕಳೆದ ವರ್ಷ ಜನವರಿಯಿಂದ ಉತ್ತರ ಮತ್ತು ಪಶ್ಚಿಮ ಗಡಿಗಳಲ್ಲಿ ಸಕಾರಾತ್ಮಕ ಬೆಳವಣಿಗೆಗಳು ನಡೆದಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಹೇಳಿದ್ದಾರೆ.
ನವದೆಹಲಿಯಲ್ಲಿ ಬುಧವಾರ ವರ್ಚುವಲ್ ಆಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜನರಲ್ ನರವಾನೆ, ಉತ್ತರದ ಗಡಿಗಳಲ್ಲಿ ಭಾರತೀಯ ಸೇನೆಯು ಉನ್ನತ ಮಟ್ಟದ ಕಾರ್ಯಾಚರಣೆಯ ಸನ್ನದ್ಧತೆಯನ್ನು ಮುಂದುವರೆಸಿದೆ ಮತ್ತು ಅದೇ ಸಮಯದಲ್ಲಿ, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಎಂದಿದ್ದಾರೆ.
ಚೀನಾದ ಹೊಸ ಗಡಿ ಕಾನೂನಿನ ಕುರಿತು ಮಾತನಾಡಿದ ಅವರು, ಅದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಮತ್ತು ನಾವು ಹಿಂದೆ ಮಾಡಿಕೊಂಡಿರುವ ಒಪ್ಪಂದಗಳಿಗೆ ಅನುಗುಣವಾಗಿಲ್ಲ ಎಂದಿದ್ದಾರೆ
ಯಾವುದೇ ಸವಾಲನ್ನು ಎದುರಿಸಲು ನಾವು ಹೆಚ್ಚು ಸಿದ್ಧರಾಗಿದ್ದೇವೆ ಎಂದ ಅವರು, ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಚೀನಾದ ಪ್ರಯತ್ನಗಳಿಗೆ ಸೇನೆಯ ಪ್ರತಿಕ್ರಿಯೆಯು ತುಂಬಾ ದೃಢವಾಗಿದೆ. ಭಾರತೀಯ ಸೇನೆಯು ಪೆಟ್ರೋಲಿಂಗ್ ಪಾಯಿಂಟ್ 15, ಹಾಟ್ ಸ್ಪ್ರಿಂಗ್ಸ್ನಲ್ಲಿ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಯಾವುದೇ ಅನಿಶ್ಚಿತತೆಗಳನ್ನು ನಿಭಾಯಿಸಲು ಅಗತ್ಯ ರಕ್ಷಣೋಪಾಯಗಳನ್ನು ಕೈಗೊಳ್ಳಲಾಗಿದೆ. ಉತ್ತರದ ಗಡಿಗಳಲ್ಲಿ ಮೂಲಸೌಕರ್ಯಗಳ ಉನ್ನತೀಕರಣ ಮತ್ತು ಅಭಿವೃದ್ಧಿಯನ್ನು ಸಮಗ್ರ ರೀತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಭಾಗದಲ್ಲಿ, ವಿವಿಧ ಲಾಂಚ್ ಪ್ಯಾಡ್ಗಳಲ್ಲಿ ಭಯೋತ್ಪಾದಕರ ಚಟುವಟಿಕೆ ಹೆಚ್ಚುತ್ತಿದೆ ಮತ್ತು ಗಡಿ ನಿಯಂತ್ರಣ ರೇಖೆಯಾದ್ಯಂತ ಒಳನುಸುಳುವಿಕೆಯ ಪುನರಾವರ್ತಿತ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.