ಬೆಂಗಳೂರು: ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊನೆಗೂ ಅರ್ಧಕ್ಕೆ ಮೊಟಕುಗೊಂಡಿದೆ. ಕೋವಿಡ್ ಸಂದರ್ಭದಲ್ಲಿ ಭಾರೀ ಜನರನ್ನು ಸೇರಿಸಿ ಕಾಂಗ್ರೆಸ್ ನಾಯಕರುಗಳು ಮಾಡುತ್ತಿದ್ದ ಪಾದಯಾತ್ರೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಇದೀಗ ಕೇವಲ ಐದೇ ದಿನಕ್ಕೆ ಪಾದಯಾತ್ರೆ ಕೊನೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
ರಾಮನಗರ ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವ ಸಭೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದೆವು. ಪಾದಯಾತ್ರೆ ಮಾಡುವಾಗ ಕೋವಿಡ್ ಇರಲಿಲ್ಲ. ಮುಂದಿನ ದಿನಗಳಲ್ಲಿ ಮೇಕೆದಾಟು ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಹೈಕೋರ್ಟ್ ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾದಯಾತ್ರೆಗೆ ಅವಕಾಶ ನೀಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಕೆಪಿಸಿಸಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನೋಟಿಸ್ ನೀಡಿತ್ತು. ನಂತರ ಸರ್ಕಾರ ಪಾದಯಾತ್ರೆ ನಿಷೇಧಿಸಿ ಆದೇಶ ಹೊರಡಿಸಿತ್ತು. ಮೊದಲಿಗೆ ಆದೇಶಕ್ಕೆ ಬಗ್ಗದ ಕಾಂಗ್ರೆಸ್ಸಿಗರು ಕೊನೆಗೆ ಸರ್ಕಾರದ ನಿರ್ಧಾರಕ್ಕೆ ಮಣಿದು ಪಾದಯಾತ್ರೆ ನಿಲ್ಲಿಸಿದ್ದಾರೆ.
Karnataka: Senior State Congress leaders hold a meeting in Ramanagara to discuss the future course of action regarding Mekedatu Padayatra in wake of the cancellation of permission for the padayatra’s final event in Bengaluru & the high court’s observation pic.twitter.com/AMXbX2rupd
— ANI (@ANI) January 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.