ನವದೆಹಲಿ: ಮಕರ ಸಂಕ್ರಾಂತಿಯ ಶುಭ ದಿನವಾದ ಇಂದು ಜಾಗತಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಒಂದು ಕೋಟಿಗೂ ಅಧಿಕ ಜನರು ಇದರಲ್ಲಿ ಭಾಗವಹಿಸಿ ಸೂರ್ಯ ನಮಸ್ಕಾರ ಮಾಡಿದ್ದಾರೆ.
ಸೂರ್ಯ ನಮಸ್ಕಾರವು ದೇಹ ಮತ್ತು ಮನಸ್ಸಿನ ಸಮನ್ವಯದೊಂದಿಗೆ 12 ಹಂತಗಳಲ್ಲಿ ಮಾಡುವ ಎಂಟು ಆಸನಗಳ ಒಂದು ಗುಂಪಾಗಿದೆ. ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಡಿಯಲ್ಲಿ ಆಯುಷ್ ಸಚಿವಾಲಯವು ಕಾರ್ಯಕ್ರಮವನ್ನು ಆಯೋಜಿಸಿದೆ. ಭಾರತ ಮತ್ತು ವಿದೇಶಗಳ ಎಲ್ಲಾ ಪ್ರಮುಖ ಯೋಗ ಸಂಸ್ಥೆಗಳು ಈ ಜಾಗತಿಕ ಕಾರ್ಯಕ್ರಮದಲ್ಲಿ ಇಂದು ಬೆಳಿಗ್ಗೆ ಭಾಗವಹಿಸಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್, ಸೂರ್ಯ ನಮಸ್ಕಾರವು ಚೈತನ್ಯ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ಸಚಿವಾಲಯವು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.
ಜನರ ಆರೋಗ್ಯವನ್ನು ಬಲಪಡಿಸಲು ಸರ್ಕಾರ ಬದ್ಧವಾಗಿದೆ.ಯೋಗದ ಪ್ರಮುಖ ಅಭ್ಯಾಸಗಳಲ್ಲಿ ಸೂರ್ಯ ನಮಸ್ಕಾರವೂ ಒಂದು. ಇದರಿಂದ ದೇಹದ ಸದೃಢತೆ ಹೆಚ್ಚುತ್ತದೆ ಎಂದು ಆಯುಷ್ ಖಾತೆ ರಾಜ್ಯ ಸಚಿವ ಡಾ.ಮುಂಜ್ಪಾರ ಮಹೇಂದ್ರಭಾಯಿ ಕಲುಭಾಯಿ ಹೇಳಿದ್ದಾರೆ.
शुक्रवार को भारत सहित दुनिया भर के कई देशों में वर्चुअली आयोजित सामूहिक सूर्य नमस्कार कार्यक्रम में केंद्रीय आयुष मंत्री श्री @sarbanandsonwal ने कहा कि सूर्य नमस्कार से लोग अपने स्वास्थ्य को बेहतर बना रहे हैं। इस कार्यक्रम में भाग लेकर लोगों ने दुनिया को एकता का संदेश दिया है। pic.twitter.com/EVxJ2CXt1E
— Ministry of Ayush (@moayush) January 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.