ಬೆಂಗಳೂರು : ಇಂದು ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಂತೋಷದಿಂದ ಆಚರಣೆ ಮಾಡಲಾಗುತ್ತಿದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ.
“ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ತನ್ನ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರ ಹೊಸ ಕನಸು,ಆಸೆ-ಆಕಾಂಕ್ಷೆಗಳು ಈಡೇರಲಿ. ಎಲ್ಲರ ಬಾಳಲ್ಲಿ ಹೊಸ ಚೈತನ್ಯ ಮೂಡಲಿ. ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ. ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಿ ಕರ್ನಾಟಕವನ್ನು ಕೋವಿಡ್ ಮುಕ್ತ ಮಾಡೋಣ. ಸರ್ವರಿಗೂ ಮಕರ ಸಂಕ್ರಮಣದ ಶುಭಾಶಯಗಳು” ಎಂದು ಅವರು ಟ್ವಿಟ್ ಮಾಡಿದ್ದಾರೆ.
ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ.
ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ತನ್ನ ಪಥ ಬದಲಿಸುವ ಈ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರ ಹೊಸ ಕನಸು,ಆಸೆ-ಆಕಾಂಕ್ಷೆಗಳು ಈಡೇರಲಿ.ಎಲ್ಲರ ಬಾಳಲ್ಲಿ ಹೊಸ ಚೈತನ್ಯ ಮೂಡಲಿ. ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ. ಎಲ್ಲರೂ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಿ ಕರ್ನಾಟಕವನ್ನು ಕೋವಿಡ್ ಮುಕ್ತ ಮಾಡೋಣ.
ಸರ್ವರಿಗೂ ಮಕರ ಸಂಕ್ರಮಣದ ಶುಭಾಶಯಗಳು. pic.twitter.com/maCFN0LkzS— Basavaraj S Bommai (@BSBommai) January 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.