ನವದೆಹಲಿ: ಭಾರತದಲ್ಲಿ ಜನವರಿ 15 ಅನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳೊಂದಿಗೆ ಕಟ್ಟುನಿಟ್ಟಾದ ಪ್ರೋಟೋಕಾಲ್ಗಳ ನಡುವೆ ಇಂದು ಎಲ್ಲಾ ಸೇನಾ ಕಮಾಂಡ್ ಹೆಡ್ಕ್ವಾರ್ಟರ್ಸ್ಗಳಲ್ಲಿ ಭಾರತೀಯ ಸೇನಾ ದಿನವನ್ನು ಇಂದು ಆಚರಿಸಲಾಗಿದೆ.
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಅವರು ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಸೇನಾ ದಿನವನ್ನು ಆಚರಿಸಲಾಗುತ್ತದೆ. ದೆಹಲಿಯ ಕೆಎಂ ಕಾರಿಯಪ್ಪ ಪರೇಡ್ ಮೈದಾನದಲ್ಲಿ ನಡೆದ ಭಾರತೀಯ ಸೇನಾ ಪರೇಡ್ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಭಾಗವಹಿಸಿದ್ದರು.
ಇಂದು ಪರೇಡ್ ಮೈದಾನದಲ್ಲಿ ಎಂಎಂ ನರವಾಣೆ ಅವರು ಕಳೆದ ವರ್ಷ ಸೇನೆ ಎದುರಿಸಿದ ಸವಾಲುಗಳು, ಭಾರತ-ಚೀನಾ ಮಾತುಕತೆ, ಪಾಕಿಸ್ತಾನ ಸೇರಿದಂತೆ ಇತರ ವಿಷಯಗಳ ಕುರಿತು ಮಾತನಾಡಿದರು. ಅವರ ಕೆಲವು ಉಲ್ಲೇಖಗಳು ಇಲ್ಲಿವೆ:
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ಸೇನೆಗೆ ಅತ್ಯಂತ ಸವಾಲಾಗಿತ್ತು. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಇತ್ತೀಚೆಗೆ ಭಾರತ ಮತ್ತು ಚೀನಾ ನಡುವೆ 14 ನೇ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆ ನಡೆಯಿತು. ವಿವಿಧ ಹಂತಗಳಲ್ಲಿನ ಜಂಟಿ ಪ್ರಯತ್ನಗಳು ರಚನಾತ್ಮಕ ಹೆಜ್ಜೆಯಾಗಿದ್ದು, ಅನೇಕ ಪ್ರದೇಶಗಳಲ್ಲಿ ಯಶ ಕಂಡಿದೆ ಎಂದಿದ್ದಾರೆ.
ನಮ್ಮ ಸಂದೇಶವು ಸ್ಪಷ್ಟವಾಗಿದೆ, ದೇಶದ ಗಡಿಯಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಯಶಸ್ವಿಯಾಗಲು ಭಾರತೀಯ ಸೇನೆಯು ಬಿಡುವುದಿಲ್ಲ ಎಂದಿದ್ದಾರೆ.
ಎಲ್ಒಸಿಯಲ್ಲಿ, ಕಳೆದ ವರ್ಷಕ್ಕಿಂತ ಪರಿಸ್ಥಿತಿ ಉತ್ತಮವಾಗಿದೆ ಆದರೆ ಪಾಕಿಸ್ಥಾನವು ಇನ್ನೂ ಗಡಿಯ ಬಳಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ. ಸುಮಾರು 300-400 ಉಗ್ರರು ಭಾರತದೊಳಗೆ ನುಸುಳಲು ಕಾಯುತ್ತಿದ್ದಾರೆ. ಪ್ರತಿದಾಳಿಯಲ್ಲಿ ಒಟ್ಟು 144 ಉಗ್ರರು ಹತರಾಗಿದ್ದಾರೆ ಎಂದಿದ್ದಾರೆ.
Indian Army Chief General Manoj Mukund Naravane inspects the parade on Army Day at parade ground in Delhi Cantt. pic.twitter.com/PSJZb2HRGZ
— ANI (@ANI) January 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.