ನವದೆಹಲಿ: ಕಥಕ್ ಮಾಂತ್ರಿಕ ಪಂಡಿತ್ ಬಿರ್ಜು ಮಹಾರಾಜ್ ಅವರು ನಿನ್ನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರ ನಿಧನವು ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
“ಭಾರತೀಯ ನೃತ್ಯ ಕಲೆಗೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲುವಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ದುಃಖದ ಸಮಯ. ಓಂ ಶಾಂತಿ!” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಕಥಕ್ ಮಾಂತ್ರಿಕನಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಲಾಗಿದೆ.
ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕಾಳಿದಾಸ್ ಸಮ್ಮಾನ್, ನೃತ್ಯ ಚೂಡಾಮಣಿ, ಆಂಧ್ರ ರತ್ನ, ನೃತ್ಯ ವಿಲಾಸ್, ಆದರ್ಶ ಶಿಖರ್ ಸಮ್ಮಾನ್, ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ಶಿರೋಮಣಿ ಸಮ್ಮಾನ್, ರಾಜೀವ್ ಗಾಂಧಿ ಶಾಂತಿ ಪ್ರಶಸ್ತಿಗಳು ಅವರಿಗೆ ಸಂದ ಇತರ ಪ್ರಶಸ್ತಿಗಳು.
ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಖೈರಾಘರ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಗಳನ್ನು ಸಹ ಪಡೆದಿದ್ದಾರೆ.
ಪಂಡಿತ್ ಬಿರ್ಜು ಮಹಾರಾಜ್ ಅವರು ಶಾಸ್ತ್ರೀಯ ನೃತ್ಯ ಪ್ರಕಾರವಾದ ಕಥಕ್ಗೆ ಅಪಾರ ಕೊಡುಗೆಯನ್ನು ನೀಡಿದ್ದು ಮಾತ್ರವಲ್ಲದೇ, ಹಲವು ಬಾಲಿವುಡ್ ಹಾಡುಗಳಿಗೆ ನೃತ್ಯ ಸಂಯೋಜನೆಯನ್ನು ಕೂಡ ಮಾಡಿದ್ದಾರೆ.
भारतीय नृत्य कला को विश्वभर में विशिष्ट पहचान दिलाने वाले पंडित बिरजू महाराज जी के निधन से अत्यंत दुख हुआ है। उनका जाना संपूर्ण कला जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति! pic.twitter.com/PtqDkoe8kd
— Narendra Modi (@narendramodi) January 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.