ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಬಿಜೆಪಿ ನಾಯಕರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದ್ದು, ಇದರಲ್ಲಿ 25 ರಾಜ್ಯಗಳ ಪ್ರತಿನಿಧಿಗಳು ವರ್ಚುವಲ್ ಆಗಿ ಭಾಗವಹಿಸಿ ಬಜೆಟ್ ಕುರಿತು ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಉಪಾಧ್ಯಕ್ಷ ಬೈಜಯಂತ್ ಪಾಂಡಾ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ವಕ್ತಾರ ಗೋಪಾಲ್ ಕೃಷ್ಣ ಅಗರ್ವಾಲ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್ಗಢ, ಲಡಾಖ್, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಒಡಿಶಾ ಸೇರಿದಂತೆ 25 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ಪ್ರದೇಶಗಳ ಅಭಿವೃದ್ಧಿಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.
ಕೆಲವು ಪ್ರಮುಖ ಚಿಂತಕರು ಮತ್ತು ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಕೂಡ ಬಜೆಟ್ ಕುರಿತು ಹಣಕಾಸು ಸಚಿವರಿಗೆ ತಮ್ಮ ಸಲಹೆಗಳನ್ನು ನೀಡಿದ್ದಾರೆ.
ಕೈಗಾರಿಕೆಗಳು, ವೃತ್ತಿಪರರು, ವ್ಯಾಪಾರ ಸಮುದಾಯಗಳು, ಶಿಕ್ಷಣ ತಜ್ಞರು, ಅರ್ಥಶಾಸ್ತ್ರಜ್ಞರು ಸೇರಿದಂತೆ ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಮತ್ತು ಮಹಿಳಾ ಸಮುದಾಯದ ಪ್ರತಿನಿಧಿಗಳು ಈ ವರ್ಚುವಲ್ ಚರ್ಚೆಯಲ್ಲಿ ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.