ಬೆಂಗಳೂರು : ಗತಿಶಕ್ತಿ ಕಾರ್ಯಕ್ರಮದ ಮೂಲಕ ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಶಕೆಯ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.
ಅವರು ಇಂದು ಪಿಎಂ ಗತಿ ಶಕ್ತಿ ಯೋಜನೆಯ ದಕ್ಷಿಣ ವಲಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.
ಗತಿ ಶಕ್ತಿ ಯೋಜನೆ ರಾಷ್ಟ್ರ ನಿರ್ಮಾಣದ ದೂರದೃಷ್ಟಿಯಿಂದ ರೂಪಿತವಾದ ಕಾರ್ಯಕ್ರಮ. ಸಮಸ್ಯೆಗಳನ್ನು ಬಗೆಹರಿಸಲು ಒಟ್ಟಾಗಿ ಕೆಲಸ ಮಾಡುವ, ಒಂದೇ ಗುರಿಯತ್ತ ಸಾಗಲು, ದೇಶ ಕಟ್ಟುವ ಕಾಯಕಕ್ಕೆ ಅನುಕೂಲವಾಗುವ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಹಾಗೂ ಕೊರತೆ ನೀಗಿಸಲು ಇರುವ ಸಾಧನ. ಈ ಬಹುಉದ್ದೇಶಗಳನ್ನು ಹೊಂದಿರುವ ಗತಿ ಶಕ್ತಿ ಯೋಜನೆ, ನಮ್ಮ ಪ್ರಧಾನ ಮಂತ್ರಿಗಳ ಕನಸಿನ ಕೂಸು. ಪ್ರಧಾನಮಂತ್ರಿ ಹಾಗೂ ಮುಖ್ಯ ಮಂತ್ರಿಯಾಗಿ ಕೆಲಸ ಮಾಡಿರುವ ಅವರ ಅನುಭವವು ಭಾರತ ಸರ್ಕಾರ ಹಾಗೂ ರಾಜ್ಯಗಳ ಬೃಹತ್ ಯೋಜನೆಗಳನ್ನು ಸಾಧಿಸಲು ಸಮನ್ವಯ ಹಾಗೂ ಸಹಕಾರ ನೀಡಲು ಸೂಕ್ತ ಸಮಯ ಇದಾಗಿದೆ ಎನ್ನುವುದನ್ನು ನಿರೂಪಿಸಿದೆ ಎಂದರು.
ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಒಕ್ಕೂಟದ ಸಹಕಾರವನ್ನು ಉದಾಹರಣೆಯಾಗಿ ತೋರಬಹುದಾಗಿದೆ. ಏಕೆಂದರೆ ಬಹುತೇಕ ಮೂಲಸೌಕರ್ಯ ರಾಜ್ಯ ಗಳ ಮೂಲಕವೇ ಹಾದುಹೋಗುತ್ತದೆ ಹಾಗೂ ಅವರ ಸಹಕಾರದಿಂದಲೇ ಅನುಷ್ಠಾನಕ್ಕೆ ತರಬೇಕಿದೆ. ಭಾರತ ಸರ್ಕಾರದ ದೂರದೃಷ್ಟಿ ಮತ್ತು ಸಹಕಾರದಿಂದ ಎನ್.ಎಂ.ಪಿ ಮತ್ತು ಡಿಜಿಟಲ್ ಶಿಷ್ಟಾಚಾರದ ವ್ಯಾಪ್ತಿಯೊಳಗೆ ತರುವ ಯೋಜನೆಗಳು ರಾಷ್ಟ್ರ ದಶಕಗಳಿಂದ ಬೇಡಿಕೆಯಲ್ಲಿದ್ದ ಕಾರ್ಯಕ್ರಮಗಳಾಗಿವೆ ಎಂದರು.
ರಸ್ತೆ ಸಾರಿಗೆಯಲ್ಲಿ ಗತಿ ಮತ್ತು ಶಕ್ತಿ ಎರಡನ್ನೂ ಸಾಧಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವರು, ರಾಷ್ಟ್ರೀಯ ಹೆದ್ದಾರಿಗಳನ್ನು ಕಳೆದ 7 ವರ್ಷಗಳಲ್ಲಿ ಹತ್ತು ಪಟ್ಟು ಹೆಚ್ಚಿಸಿದ್ದಾರೆ. ಅವರು ರಾಷ್ಟ್ರೀಯ ಹೆದ್ದಾರಿ ಕೇವಲ ರಸ್ತೆ ಸಾರಿಗೆ ಮತ್ತು ಲಾಜಿಸ್ಟಿಕ್ಗಳಿಗೆ ಮಾತ್ರ ಸೀಮಿತವಾಗಿರದೆ, ರಾಷ್ಟ್ರೀಯ ಅಭಿವೃದ್ಧಿಯನ್ನು ಸಾಧ್ಯವಾಗಿಸಬಲ್ಲದು ಎಂದು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.