ಬೆಂಗಳೂರು: ಬೆಂಗಳೂರಿನ ದೇವಾಸ್ ಮಲ್ಟಿಮೀಡಿಯಾ ಸಂಸ್ಥೆಯನ್ನು ಮುಚ್ಚಬೇಕೆಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್ನ ತೀರ್ಪು ಅತ್ಯಂತ ಮಹತ್ವದ್ದು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು ಅಭಿಪ್ರಾಯಪಟ್ಟಿದ್ದಾರೆ.
ನ್ಯಾಶನಲ್ ಕಂಪೆನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) 2021ರ ಮೇ ತಿಂಗಳಿನಲ್ಲಿ ದೇವಾಸ್ ಕಂಪೆನಿಯನ್ನು ಮುಚ್ಚಲು ಸೂಚಿಸಿತ್ತು. ಇದರ ವಿರುದ್ಧ ದೇವಾಸ್ ಮಲ್ಟಿಮೀಡಿಯಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಎನ್ಸಿಎಲ್ಟಿ ಆದೇಶವನ್ನು ಎತ್ತಿ ಹಿಡಿದಿದೆ ಮತ್ತು ದೇವಾಸ್ ಸಂಸ್ಥೆಯನ್ನು ಮುಚ್ಚಲು ಸಹಮತ ಸೂಚಿಸಿದೆ ಎಂದು ಮಹೇಶ್ ಅವರು ತಿಳಿಸಿದ್ದಾರೆ.
ದೇವಾಸ್ ಮತ್ತು ಇಸ್ರೋದ ಅಂಗಸಂಸ್ಥೆಯಾದ ಅಂತರಿಕ್ಷ್ ನಡುವಿನ ಒಪ್ಪಂದದ ವೇಳೆ ವಂಚನೆ ನಡೆದಿದೆ. ಸ್ಪೆಕ್ಟ್ರಂ ಒಪ್ಪಂದದ ಪರಿಣಾಮವಾಗಿ ಸರಕಾರದ ಬೊಕ್ಕಸಕ್ಕೆ 2 ಲಕ್ಷ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಹಾ ಲೆಕ್ಕ ಪರಿಶೋಧಕ ಸಂಸ್ಥೆ (ಸಿಎಜಿ) ತಿಳಿಸಿತ್ತು. ಈ ತೀರ್ಪಿನ ಮೂಲಕ ಕಾಂಗ್ರೆಸ್ ಅವಧಿಯ ಮತ್ತೊಂದು ದೊಡ್ಡ ಭ್ರಷ್ಟಾಚಾರ ಹಗರಣದ ನಗ್ನ ದರ್ಶನವಾಗಿದೆ. ಕ್ರೋನಿ ಬಂಡವಾಳಗಾರರಿಗೆ ಲಾಭ ಆಗುವ ಪಿತೂರಿ ಇದರ ಹಿಂದಿರುವುದೂ ಬಹಿರಂಗಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಯವರಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ವಾದವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸರಕಾರವು ಮಧ್ಯವರ್ತಿಗಳ ಜೊತೆಗೂಡಿ ಮೋಸ ಮಾಡಲು ಮುಂದಾದುದನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಭ್ರಷ್ಟಾಚಾರದ ವಿರುದ್ಧ ಮಾತನ್ನೇ ಬಂಡವಾಳ ಮಾಡಿಕೊಂಡ ಯುಪಿಎ ಮತ್ತು ಅದರ ಅಂಗಪಕ್ಷವೆನಿಸಿದ ಕಾಂಗ್ರೆಸ್ನ ನಿಜ ಬಣ್ಣ ಈ ಮೂಲಕ ಬಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ ಹಾಗೂ ತಪ್ಪಿತಸ್ಥರ ವಿರುದ್ಧ ತೀವ್ರ ಕ್ರಮಕ್ಕೆ ಒತ್ತಾಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.