ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಳೆ ʼಆಜಾದಿ ಕೆ ಅಮೃತ್ ಮಹೋತ್ಸವ ಸೆ ಸ್ವರ್ಣಿಂ ಭಾರತ್ ಕೆ ಓರ್ʼನ ರಾಷ್ಟ್ರೀಯ ಅನಾವರಣ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಬ್ರಹ್ಮ ಕುಮಾರಿಯರು ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಮೀಸಲಾದ ವರ್ಷಪೂರ್ತಿ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ, ಇದರಲ್ಲಿ 30 ಕ್ಕೂ ಹೆಚ್ಚು ಅಭಿಯಾನಗಳು ಮತ್ತು 15000 ಕ್ಕೂ ಹೆಚ್ಚು ಕಾರ್ಯಕ್ರಮಗಳು ಸೇರಿವೆ.
ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಬ್ರಹ್ಮಕುಮಾರಿಯರ ಏಳು ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಇವುಗಳಲ್ಲಿ ಮೈ ಇಂಡಿಯಾ ಹೆಲ್ತಿ ಇಂಡಿಯಾ, ಆತ್ಮನಿರ್ಭರ್ ಭಾರತ: ಸ್ವಾವಲಂಬಿ ರೈತರು, ಮಹಿಳೆಯರು: ಭಾರತದ ಧ್ವಜಧಾರಿಗಳು, ಪವರ್ ಆಫ್ ಪೀಸ್ ಬಸ್ ಅಭಿಯಾನ, ಅಂದೇಖಾ ಭಾರತ್ ಸೈಕಲ್ ರ್ಯಾಲಿ, ಯುನೈಟೆಡ್ ಇಂಡಿಯಾ ಮೋಟಾರ್ ಬೈಕ್ ಅಭಿಯಾನ ಮತ್ತು ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಹಸಿರು ಉಪಕ್ರಮಗಳು ಸೇರಿವೆ.
ಕಾರ್ಯಕ್ರಮದ ಸಮಯದಲ್ಲಿ, ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರಿಂದ ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಅರ್ಪಿಸಲಾದ ಹಾಡನ್ನು ಬಿಡುಗಡೆ ಮಾಡಲಾಗುತ್ತದೆ. ಬ್ರಹ್ಮಕುಮಾರಿಯರ ಸಂಸ್ಥಾಪಕ ಪಿತಾಶ್ರೀ ಪ್ರಜಾಪಿತ ಬ್ರಹ್ಮಾವರ 53ನೇ ಪೀಠಾರೋಹಣ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.