ನವದೆಹಲಿ: ಕಾರ್ಗಿಲ್ ಯುದ್ಧದ ವೀರ, ಪರಮವೀರ ಚಕ್ರ (ಮರಣೋತ್ತರ) ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಪುತ್ಥಳಿಯನ್ನು ಅವರ ಪೋಷಕರು ಬುಧವಾರ ಹಿಮಾಚಲ ಪ್ರದೇಶದ ಪಾಲಂಪುರ್ ಮಿಲಿಟರಿ ನಿಲ್ದಾಣದಲ್ಲಿ ಅನಾವರಣಗೊಳಿಸಿದರು.
ಕಾರ್ಗಿಲ್ ಸಂಘರ್ಷದ ಸಂದರ್ಭದಲ್ಲಿ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಬೆಟಾಲಿಯನ್ನ 13 ಜೆಎಕೆ ಆರ್ಐಎಫ್ನ ಕಮಾಂಡಿಂಗ್ ಆಫೀಸರ್ ಆಗಿದ್ದ ಲೆಫ್ಟಿನೆಂಟ್ ಜನರಲ್ ವೈಕೆ ಜೋಶಿ ಅವರ ಉಪಸ್ಥಿತಿಯಲ್ಲ ಜಿಎಲ್ ಬಾತ್ರಾ ಮತ್ತು ಕಮಲ್ ಕಾಂತ ಬಾತ್ರಾ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.
ಸೇನಾಧಿಕಾರಿಗಳು ಮತ್ತು ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ಶಾಲಾ ಶಿಕ್ಷಕರು, ಬಾಲ್ಯದ ಗೆಳೆಯರು ಸಹ ಸಮಾರಂಭದಲ್ಲು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದ ವೇಳೆ ವಿಕ್ರಮ್ ಬಾತ್ರಾ ಅವರು ತೋರಿಸಿದ ಅದಮ್ಯ ಸಾಹಸ, ಧೈರ್ಯ ಮತ್ತು ಶೌರ್ಯವನ್ನು ಸ್ಮರಿಸಿ ಕೊಂಡಾಡಲಾಯಿತು.
1999 ರ ಜುಲೈ 7 ರಂದು ಕಾರ್ಗಿಲ್ ಯುದ್ಧದಲ್ಲಿ ವೀರಾವೇಶದಿಂದ ಹೋರಾಡಿದ್ದ ಕ್ಯಾಪ್ಟನ್ ವಿಕ್ರಮ್ ಬಾತ್ರ “ಎ ದಿಲ್ ಮಾಂಗೆ ಮೋರ್” ಎಂಬ ಗೆಲುವಿನ ಉದ್ಘೋಷ ಹಾಕಿ ಕಾರ್ಗಿಲ್ ನ ಪಾಯಿಂಟ್ 5140 ಅನ್ನು ಗೆದ್ದಿದ್ದರು, ನಂತರ 4875 ಪಾಯಿಂಟ್ ಅನ್ನು ಗೆದ್ದು ಬಲಿದಾನಗೈದಿದ್ದರು. ಕೊನೆಯದಾಗಿ ಬಾತ್ರ ಅವರು ಗೆದ್ದಿದ್ದ 4875 ಪಾಯಿಂಟ್ ಗೆ ಬಾತ್ರಾ ಹಿಲ್ ಟಾಪ್ ಎಂದು ನಾಮಕರಣ ಮಾಡಲಾಗಿದೆ. ಎಲ್ಒಸಿಯಾದ್ಯಂತ ಇರುವ ಮೌಂಟೇನ್ ಟಾಪ್ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.