ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಆಜಾದಿ ಕೆ ಅಮೃತ್ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕಿ ಓರ್ʼ ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಭಾರತವು ನವೀನ ಚಿಂತನೆ ಮತ್ತು ವಿಧಾನ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಗತಿಪರ ಸಮಾಜವಾಗಿ ಹೊರಹೊಮ್ಮಿದೆ. ಇಂದು, ತಾರತಮ್ಯಕ್ಕೆ ಜಾಗವಿಲ್ಲದಂತೆ ವ್ಯವಸ್ಥೆಯನ್ನು ರಚಿಸಲಾಗಿದೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ದೃಢವಾಗಿ ನಿಂತಿರುವ ಸಮಾಜವನ್ನು ನಾವು ನಿರ್ಮಿಸುತ್ತಿದ್ದೇವೆ”ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.
“ಇಂದು ಕೋಟಿಗಟ್ಟಲೆ ಭಾರತೀಯರು ಸ್ವರ್ಣಿಂ ಭಾರತಕ್ಕೆ ಅಡಿಪಾಯ ಹಾಕುತ್ತಿದ್ದಾರೆ. ರಾಷ್ಟ್ರದ ಪ್ರಗತಿಯಲ್ಲಿ ನಮ್ಮ ಪ್ರಗತಿ ಅಡಗಿದೆ. ರಾಷ್ಟ್ರವು ನಮ್ಮಿಂದ ಅಸ್ತಿತ್ವದಲ್ಲಿದೆ ಮತ್ತು ನಾವು ರಾಷ್ಟ್ರದಿಂದಾಗಿ ಅಸ್ತಿತ್ವದಲ್ಲಿದ್ದೇವೆ. ಈ ಅರಿವು ನವ ಭಾರತದ ನಿರ್ಮಾಣದಲ್ಲಿ ಭಾರತೀಯರ ದೊಡ್ಡ ಶಕ್ತಿಯಾಗುತ್ತಿದೆ” ಎಂದಿದ್ದಾರೆ.
“ಈ ಅಮೃತ ಕಾಲ ಮಲಗಿದ್ದಲ್ಲಿ ಕನಸು ಕಾಣಲು ಅಲ್ಲ, ಎಚ್ಚರದಿಂದ ಸಂಕಲ್ಪಗಳನ್ನು ಈಡೇರಿಸಲು. ಮುಂಬರುವ 25 ವರ್ಷಗಳು ಕಠಿಣ ಪರಿಶ್ರಮ, ತ್ಯಾಗ ಮತ್ತು ತಪಸ್ಸಿನ ಪರಾಕಾಷ್ಠೆಯಾಗಿದೆ. ಇದು ನಮ್ಮ ಸಮಾಜ ಕಳೆದುಕೊಂಡದ್ದನ್ನು ಮರಳಿ ಪಡೆಯಲು ಇರುವ 25 ವರ್ಷಗಳ ಅವಧಿಯಾಗಿದೆ” ಎಂದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿಯರಿಂದ ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಮೀಸಲಾದ ವರ್ಷಾವಧಿಯ ಉಪಕ್ರಮಗಳನ್ನು ಅನಾವರಣಗೊಳಿಸಲಾಗಿದೆ, ಇದರಲ್ಲಿ 30 ಕ್ಕೂ ಹೆಚ್ಚು ಅಭಿಯಾನಗಳು ಮತ್ತು 15,000 ಕ್ಕೂ ಹೆಚ್ಚು ಕಾರ್ಯಕ್ರಮಗಳು ಸೇರಿವೆ.
Prime Minister Narendra Modi inaugurates the launch of 'Azadi Ke Amrit Mahotsav se Swarnim Bharat Ki Ore' pic.twitter.com/WF8L5RPEQx
— ANI (@ANI) January 20, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.