ನವದೆಹಲಿ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೊದಲ ಬಾರಿಗೆ ಇಂದು ಪಶ್ಚಿಮ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಪ್ರದೇಶದ ಶಾಮ್ಲಿ ಮತ್ತು ಮೀರತ್ ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರು ಮನೆ ಮನೆಗೆ ಪ್ರಚಾರ ನಡೆಸಲಿದ್ದಾರೆ, ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಮತ್ತು ಸಂವಾದ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ ಕೈರಾನಾದಲ್ಲಿ ಅಮಿತ್ ಶಾ ಮನೆ ಮನೆಗೆ ಪ್ರಚಾರ ಆರಂಭಿಸಲಿದ್ದಾರೆ. ಕ್ಷೇತ್ರವು 2016 ರಲ್ಲಿ ಹಿಂದೂ ಕುಟುಂಬಗಳ ವಲಸೆಯನ್ನು ಕಂಡಿತ್ತು ಮತ್ತು ನಂತರ ಭಾರೀ ಪ್ರಯತ್ನಗಳ ಕಾರಣದಿಂದ ವಲಸೆ ಹೋದವರು ವಾಪಾಸ್ ಬಂದಿದ್ದಾರೆ. ಹಲವು ಬಾರಿ ಗೆದ್ದಿದ್ದ ಹುಕುಂ ಸಿಂಗ್ ಅವರ ಹಿರಿಯ ಪುತ್ರಿ ಮೃಗಾಂಕಾ ಸಿಂಗ್ ಅವರನ್ನು ಬಿಜೆಪಿ ಇಲ್ಲಿ ಕಣಕ್ಕಿಳಿಸಿದೆ.
ಗೃಹ ಸಚಿವರು ಶಾಮ್ಲಿಯಲ್ಲಿ ಶಾಮ್ಲಿ ಮತ್ತು ಬಾಗ್ಪತ್ನ ಪಕ್ಷದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಅವರು ಶನಿವಾರ ಸಂಜೆ ಮೀರತ್ನಲ್ಲಿ ಪ್ರಮುಖರೊಂದಿಗೆ ಸಭೆ ನಡೆಸಿ ತಮ್ಮ ದಿನಚರಿಗಳನ್ನು ಮುಕ್ತಾಯಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಉತ್ತರ ಪ್ರದೇಶದ ಚುನಾವಣೆಯು ಬಿಜೆಪಿಗೆ ನಿರ್ಣಾಯಕವಾಗಿದೆ ಯಾಕೆಂದರೆ ಅದು ಸುಮಾರು 108 ಸ್ಥಾನಗಳನ್ನು ಒಳಗೊಂಡಿದೆ ಮತ್ತು ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಇಲ್ಲಿ ಉತ್ತಮ ಸಾಧನೆ ಮಾಡಿತ್ತು. 2017 ರಲ್ಲಿ ಪಕ್ಷವು ಈ ಪ್ರದೇಶದಲ್ಲಿ 83 ಸ್ಥಾನಗಳನ್ನು ಗೆದ್ದಿತ್ತು ಮತ್ತು ಪಕ್ಷದ ನಾಯಕತ್ವವು ಈ ಸಾಧನೆಯನ್ನು ಈ ವರ್ಷವೂ ಪುನರಾವರ್ತಿಸುವ ವಿಶ್ವಾಸದಲ್ಲಿದೆ.
ಉತ್ತರ ಪ್ರದೇಶ ವಿಧಾನಸಭೆಗೆ 403 ಸದಸ್ಯರ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 10 ರಂದು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.