ನವದೆಹಲಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ವಿವಿಧ ಭಾಗಗಳ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನದ ಕುರಿತು ಸಂವಾದ ನಡೆಸಿದರು.
“ಜಿಲ್ಲಾ ಆಡಳಿತಗಳು ಉತ್ತಮ ಆಡಳಿತದಲ್ಲಿ ಪ್ರಮುಖ ಪಾತ್ರವನ್ನು ಹೊಂದಿವೆ. ಇದು ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ. ಕ್ಷೇತ್ರ ಭೇಟಿ ಮತ್ತು ಪರಿಶೀಲನೆಗಾಗಿ ವಿವರವಾದ ಮಾರ್ಗಸೂಚಿಗಳನ್ನು ಮಾಡಬೇಕು” ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ ಸಂವಾದದಲ್ಲಿ ಪಾಲ್ಗೊಂಡಿದ್ದರು.
“ಕೇಂದ್ರ, ರಾಜ್ಯಗಳು ಮತ್ತು ಸ್ಥಳೀಯ ಆಡಳಿತದ ಟೀಮ್ ವರ್ಕ್ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಧಿಕಾರಿಗಳು ಈಗ ತಮ್ಮ ಪ್ರಯತ್ನದಿಂದ ಜನರ ಜೀವನ ಸುಧಾರಿಸುವುದನ್ನು ನೋಡಿ ತೃಪ್ತಿಪಡುತ್ತಿದ್ದಾರೆ. ಪ್ರತಿ ಜಿಲ್ಲೆಯೂ ಇತರರ ಯಶಸ್ಸಿನಿಂದ ಕಲಿಯಬೇಕು ಮತ್ತು ಅವರ ಸವಾಲುಗಳನ್ನು ಮೌಲ್ಯಮಾಪನ ಮಾಡಬೇಕು” ಎಂದಿದ್ದಾರೆ.
ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭಿವೃದ್ಧಿಗೆ ಆಡಳಿತ ಮತ್ತು ಸಾರ್ವಜನಿಕರ ನಡುವಿನ ನೇರ ಸಂಪರ್ಕ ಮುಖ್ಯವಾಗಿದೆ ಎಂದ ಮೋದಿ, ತಂತ್ರಜ್ಞಾನ ಮತ್ತು ನಾವೀನ್ಯತೆ ಈ ಅಭಿಯಾನದ ಪ್ರಮುಖ ಅಂಶಗಳಾಗಿವೆ ಎಂದು ಒತ್ತಿ ಹೇಳಿದರು. ಕಳೆದ ನಾಲ್ಕು ವರ್ಷಗಳಲ್ಲಿ ದೇಶದ ಪ್ರತಿಯೊಂದು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಜನ್ ಧನ್ ಖಾತೆಗಳಲ್ಲಿ ನಾಲ್ಕೈದು ಪಟ್ಟು ಹೆಚ್ಚಳವಾಗಿದೆ.. ಈಗ ಪ್ರತಿಯೊಂದು ಕುಟುಂಬವೂ ಶೌಚಾಲಯ ಹೊಂದಿದ್ದು, ಪ್ರತಿ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಬಂದಿದೆ ಎಂದರು.
ಅನುಷ್ಠಾನದ ಸಮಯದಲ್ಲಿ ಸೋರಿಕೆ ತಡೆದಾಗ ಸಂಪನ್ಮೂಲಗಳ ಅತ್ಯುತ್ತಮ ಬಳಕೆ ನಡೆಯುತ್ತದೆ ಎಂಬುದನ್ನು ಮಹತ್ವಾಕಾಂಕ್ಷೆಯ ಜಿಲ್ಲೆಗಳು ಸಾಬೀತುಪಡಿಸಿವೆ ಎಂದು ಪ್ರಧಾನಮಂತ್ರಿ ಹೇಳಿದರು. ನೂರು ಪ್ರತಿಶತದಷ್ಟು ಸೇವೆಗಳು ಮತ್ತು ಸೌಲಭ್ಯಗಳನ್ನು ಪೂರೈಸುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.