ನವದೆಹಲಿ: ಇಂದು ರಾಷ್ಟ್ರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ಆಚರಿಸುತ್ತಿದೆ. ಪ್ರತಿವರ್ಷ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಆಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಇಂಡಿಯಾ ಗೇಟ್ನಲ್ಲಿ ನೇತಾಜಿ ಅವರ ಹಾಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ಇಲ್ಲಿ ಶಿಲೆಯಿಂದ ರಚಿತವಾದ ನೇತಾಜಿ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮೋದಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವಿಟ್ ಮಾಡಿ, ” ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಭಾರತ ಅವರಿಗೆ ಕೃತಜ್ಞತೆಯಿಂದ ಗೌರವ ಸಲ್ಲಿಸುತ್ತದೆ. ಸ್ವತಂತ್ರ ಭಾರತ – ಆಜಾದ್ ಹಿಂದ್ ಕಲ್ಪನೆಗೆ ಅವರ ಅಗಾಧ ಬದ್ಧತೆಯನ್ನು ಪೂರೈಸಲು ಅವರು ತೆಗೆದುಕೊಂಡ ಧೈರ್ಯಶಾಲಿ ಹೆಜ್ಜೆಗಳು ಅವರನ್ನು ರಾಷ್ಟ್ರೀಯ ಐಕಾನ್ನನ್ನಾಗಿ ಮಾಡಿದೆ. ಅವರ ಆದರ್ಶಗಳು ಮತ್ತು ತ್ಯಾಗಗಳು ಪ್ರತಿಯೊಬ್ಬ ಭಾರತೀಯರಿಗೆ ಸದಾ ಸ್ಫೂರ್ತಿ ನೀಡುತ್ತವೆ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ, “ಎಲ್ಲಾ ದೇಶವಾಸಿಗಳಿಗೆ ಪರಾಕ್ರಮ್ ದಿನದ ಶುಭಾಶಯಗಳು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಪ್ರತಿಯೊಬ್ಬ ಭಾರತೀಯನೂ ನಮ್ಮ ರಾಷ್ಟ್ರಕ್ಕೆ ಅವರ ಅಮೋಘ ಕೊಡುಗೆಯ ಬಗ್ಗೆ ಹೆಮ್ಮೆಪಡುತ್ತಾನೆ” ಎಂದಿದ್ದಾರೆ.
सभी देशवासियों को पराक्रम दिवस की ढेरों शुभकामनाएं।
नेताजी सुभाष चंद्र बोस की 125वीं जयंती पर उन्हें मेरी आदरपूर्ण श्रद्धांजलि।
I bow to Netaji Subhas Chandra Bose on his Jayanti. Every Indian is proud of his monumental contribution to our nation. pic.twitter.com/Ska0u301Nv
— Narendra Modi (@narendramodi) January 23, 2022
India gratefully pays homage to Netaji Subhas Chandra Bose on his 125th birth anniversary. The daring steps that he took to fulfil his fierce commitment to the idea of a free India — Azad Hind — make him a national icon. His ideals and sacrifice will forever inspire every Indian.
— President of India (@rashtrapatibhvn) January 23, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.