ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದ ಜೆಎನ್ಯು ವಿದ್ಯಾರ್ಥಿ ಶಾರ್ಜಿಲ್ ಇಮಾಮ್ ವಿರುದ್ಧ ನ್ಯಾಯಾಲಯ ದೇಶದ್ರೋಹದ ಆರೋಪಪಟ್ಟಿ ದಾಖಲಿಸಿದೆ.
ಈತ 2019ರ ಡಿಸೆಂಬರ್ 13ರಂದು ಮತ್ತು 2020 ರ ಜನವರಿ 16ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದ. ಅಸ್ಸಾಂ ಅನ್ನು ಭಾರತದ ಇತರ ಭಾಗಗಳಿಂದ ಪ್ರತ್ಯೇಕಿಸಬೇಕು ಎಂದು ಕರೆ ನೀಡಿದ್ದ. ಈ ಹಿನ್ನೆಲೆಯಲ್ಲಿ 2020 ರ ಜನವರಿ 28ರಂದು ಈತನನ್ನು ಬಿಹಾರದಲ್ಲಿ ಬಂಧಿಸಲಾಗಿತ್ತು.
ಈತ ಕಳೆದ ಎರಡು ವರ್ಷಗಳಿಂದ ತಿಹಾರ್ ಜೈಲಿನಲ್ಲಿ ಇದ್ದಾನೆ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಅನ್ವಯ ದೇಶದ್ರೋಹದ ಪ್ರಕರಣ ಮತ್ತು ಕಾನೂನುಬಾಹಿರ ಚಟುವಟಿಕೆಯ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಲ್ಲದೆ ದೆಹಲಿಯ ಕಾರ್ಕರ್ಡೋಮ್ ನ್ಯಾಯಾಲಯ ದೇಶದ್ರೋಹದ ಆರೋಪ ಪಟ್ಟಿಯನ್ನು ಈತನ ವಿರುದ್ಧ ದಾಖಲಿಸಿದೆ. ಹೆಚ್ಚುವರಿ ನ್ಯಾಯಾಧೀಶ ಅಮಿತಾಬ್ ರಾವತ್ ಆರೋಪ ಪಟ್ಟಿ ದಾಖಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.