ನವದೆಹಲಿ: 12 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ವರ್ಷದ ಮತದಾರರ ದಿನದ ವಿಷಯ ‘ಎಲ್ಲರೂ ಒಳಗೊಳ್ಳುವ, ಪ್ರವೇಶಿಸಬಹುದಾದ ಮತ್ತು ಭಾಗವಹಿಸುವಂತೆ ಚುನಾವಣೆಗಳನ್ನು ಮಾಡುವುದು’ ಎಂಬುದಾಗಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಈ ದಿನದ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ರಾಷ್ಟ್ರೀಯ ಸಮಾರಂಭದಲ್ಲಿ ವರ್ಚುವಲ್ ಆಗಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ, 2021-22 ನೇ ಸಾಲಿನ ಅತ್ಯುತ್ತಮ ಚುನಾವಣಾ ಕಾರ್ಯಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಐಟಿ ಉಪಕ್ರಮಗಳು, ಭದ್ರತಾ ನಿರ್ವಹಣೆ, ಚುನಾವಣಾ ನಿರ್ವಹಣೆ ಮಾಡಿದ, ಮತದಾರರಲ್ಲಿ ಜಾಗೃತಿಯನ್ನು ಮೂಡಿಸಿದ ಅತ್ಯುತ್ತಮ ಸಾಧನೆಗಾಗಿ ನೀಡಲಾಗುತ್ತದೆ.
ಮತದಾರರ ಜಾಗೃತಿಗಾಗಿ ತಮ್ಮ ಅಮೂಲ್ಯ ಕೊಡುಗೆಗಾಗಿ ಸರ್ಕಾರಿ ಇಲಾಖೆಗಳು, ಭಾರತೀಯ ಚುನಾವಣಾ ಆಯೋಗದ (ಇಸಿಐ) ಐಕಾನ್ಗಳು ಮತ್ತು ಮಾಧ್ಯಮ ಗುಂಪುಗಳಂತಹ ಪ್ರಮುಖ ಪಾಲುದಾರರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಸಮಾರಂಭದಲ್ಲಿ, ಹೊಸದಾಗಿ ಸೇರ್ಪಡೆಗೊಂಡ ಮತದಾರರನ್ನು ಸನ್ಮಾನಿಸಲಾಗುತ್ತದೆ ಮತ್ತು ಅವರಿಗೆ ಮತದಾರರ ಭಾವಚಿತ್ರ ಗುರುತಿನ ಚೀಟಿಯನ್ನು (EPIC) ಹಸ್ತಾಂತರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.