ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು 73 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅವರು ಭಾಷಣವನ್ನು ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್ವರ್ಕ್ನಲ್ಲಿ ಸಂಜೆ 7 ರಿಂದ ಪ್ರಸಾರ ಮಾಡಲಾಗುತ್ತದೆ ಮತ್ತು ದೂರದರ್ಶನದ ಎಲ್ಲಾ ಚಾನಲ್ಗಳಲ್ಲಿ ಹಿಂದಿಯಲ್ಲಿ ಮತ್ತು ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರವಾಗುತ್ತದೆ. ಖಾಸಗಿ ಚಾನೆಲ್ ನಲ್ಲೂ ಪ್ರಸಾರವಾಗಲಿದೆ.
ದೂರದರ್ಶನದಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಭಾಷಣ ಪ್ರಸಾರವಾದ ಬಳಿಕ ದೂರದರ್ಶನದ ಪ್ರಾದೇಶಿಕ ಚಾನೆಲ್ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ.
ಎಐಆರ್ ತನ್ನ ಪ್ರಾದೇಶಿಕ ನೆಟ್ವರ್ಕ್ಗಳಲ್ಲಿ 9.30 PM ರಿಂದ ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ಪ್ರಸಾರ ಮಾಡುತ್ತದೆ.
ಗಣರಾಜ್ಯೋತ್ಸವದ ಮುನ್ನಾದಿನದಂದು ಸಂಜೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.