ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಪೊಲೀಸ್ ಪಡೆಗಳಿಂದ ಗೌರವ ರಕ್ಷೆ ಸ್ವೀಕರಿಸಿದ್ದಾರೆ.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, “ಕೋವಿಡ್ ವಿರುದ್ಧದ ಹೋರಾಟವನ್ನು ಕರ್ನಾಟಕ ಯಶಸ್ವಿಯಾಗಿ ನಡೆಸುತ್ತಿದೆ. ಈ ಕಾರ್ಯದಲ್ಲಿ ಸರ್ಕಾರ, ಪೊಲೀಸ್, ಆರೋಗ್ಯ ಕಾರ್ಯಕರ್ತರ ಶ್ರಮವೂ ಅಧಿಕವಿದೆ. ಆಕ್ಸಿಜನ್, ವೆಂಟಿಲೇಟರ್ ಉತ್ಪಾದನೆ ಹೆಚ್ಚಳವಾಗಿದೆ. ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ವಾರ್ ರೂಂ ಆರಂಭಿಸಿದ್ದೇವೆ. ಕೇಂದ್ರದ ಅಹಯೋಗದೊಂದಿಗೆ ರಾಜ್ಯ ಸೋಂಕು ನಿಯಂತ್ರಣ ಮಾಡಿದೆ. ಜನರ ಸಹಕಾರವೂ ಇದಕ್ಕಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಮರಣದ ದರ ಕಡಿಮೆ ಇದೆ. ಟೆಲಿಮೆಡಿಸಿನ್, ಕ್ವಾರಂಟೈನ್ ವಿಚಾರದಲ್ಲೂ ನಾವು ಹಿಂದೆ ಬಿದ್ದಿಲ್ಲ. ಭಾರತ ಎರಡು ಕೋವಿಡ್ ಲಸಿಕೆಗಳನ್ನು ತಯಾರಿಸಿದ್ದು ಮಾತ್ರವಲ್ಲದೇ ಅದನ್ನು ವಿದೇಶಗಳಿಗೆ ರಫ್ತು ಮಾಡಿದೆ” ಎಂದಿದ್ದಾರೆ.
“ಹೊಸ ಚಿಂತನೆ, ಹೊಸ ಚೈತನ್ಯಗಳೊಂದಿಗೆ 2022ಕ್ಕೆ ಹೆಜ್ಜೆ ಇಟ್ಟಿದ್ದೇವೆ. ಕೋವಿಡ್ ವಿರುದ್ಧ ಒಟ್ಟಾಗಿ ಹೋರಾಡೋಣ. ಎಲ್ಲಾ ಕಷ್ಟಗಳನ್ನು ಮೆಟ್ಟಿ ನಿಲ್ಲೋಣ” ಎಂದಿದ್ದಾರೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಚರಣೆ ಸರಳವಾಗಿ ನಡೆದಿದೆ.
ಕೊರೋನಾ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಕೇವಲ 200 ಮಂದಿಗಷ್ಟೇ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಭಾಗಿಯಾಗುವವರಿಗೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು, ಸೀಮಿತ ಮಂದಿ ಭಾಗಿಯಾಗುವುದರಿಂದ ಕೋವಿಡ್ ಎರಡು ಡೋಸ್ ಕಡ್ಡಾಯ ಮಾಡಿಲ್ಲ. ಪರೇಡ್ನಲ್ಲಿ ಭಾಗಿಯಾಗುವವರಿಗೆ ಕಾರ್ಯಕ್ರಮಕ್ಕೂ ಮುನ್ನ ಕೋವಿಡ್ ಟೆಸ್ಟ್ ನಡೆಸಲಾಗಿದೆ.
ಪರೇಡ್ನಲ್ಲಿ ಲೆಫ್ಟಿನೆಂಟ್ ಕರ್ನಲ್ ಆಶಿಸ್ ಚನ್ನಪ್ಪ ಅವರ ನಾಯಕತ್ವ ಮತ್ತು ಸಹಾಯಕ ನಾಯಕತ್ವ ಮೇಜರ್ ಲಲಿತ್ಕುಮಾರ್ ಅವರ ನೇತೃತ್ವದಲ್ಲಿ ಆಂಧ್ರಪ್ರದೇಶದ ವಿಶೇಷ ತುಕಡಿ ಒಳಗೊಂಡಂತೆ ಒಟ್ಟು 16 ತುಕಡಿಗಳು, 5 ವಾದ್ಯ ವೃಂದ 2 ಡಿ ಸ್ಟಾಟ್, 4 ಕ್ಯೂ, ಆರ್.ಟಿ, 2 ಆರ್.ಐ.ವಿ. ಮತ್ತು 6 ಅಶ್ವಗಳ ತಂಡಗಳು ಸೇರಿ ಪರೇಡ್ನಲ್ಲಿ 29 ಅಧಿಕಾರಿಗಳು ಮತ್ತು 464 ಸಿಬ್ಬಂದಿ, ಕವಾಯತಿನಲ್ಲಿ ಭಾಗವಹಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.