ನವದೆಹಲಿ: ಭಾರತದಲ್ಲಿ ಇಂದು 73ನೇ ಗಣತಂತ್ರ ದಿನವನ್ನು ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಣೆ ನಡೆಯುತ್ತಿದ್ದರೂ ಸಂಭ್ರಮಕ್ಕೆ ಯಾವುದೇ ಕೊರತೆಯಾಗಿಲ್ಲ.
ರಾಜಪಥದಲ್ಲಿ ಭಾರತದ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಸಕಲ ತಯಾರಿ ಮಾಡಲಾಗಿದೆ. ಇಲ್ಲಿ ಭಾರತದ ಸಾಂಸ್ಕೃತಿಕ ವೈಭವ ಕೂಡ ಅನಾವರಣವಾಗಲಿದೆ.
ಇನ್ನೊಂದೆಡೆ ಸಂಪ್ರದಾಯದಂತೆ ಪ್ರಧಾನಿ ನರೇಂದ್ರ ಮೋದಿಯವರು ಹುತಾತ್ಮರಿಗೆ ಗೌರವ ಸಲ್ಲಿಸಿ ಗಣರಾಜ್ಯೋತ್ಸವ ಸಮಾರಂಭದತ್ತ ತೆರಳಿದ್ದಾರೆ.
ಇಂದು ಬೆಳಿಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿದ ಅವರು, ಅಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ್ದಾರೆ ಮತ್ತು ತುಸು ಹೊತ್ತು ಮೌನಾಚರಣೆ ಮಾಡಿದ್ದಾರೆ. ಬಳಿಕ ಧ್ವಜಾರೋಹಣ ಸಮಾರಂಭದತ್ತ ಆಗಮಿಸಿದ್ದಾರೆ.
ಇನ್ನೊಂದೆಡೆ ಪದ್ಧತಿಯಂತೆ ಗಣತಂತ್ರದ ದಿನದ ಹಿನ್ನೆಲೆಯಲ್ಲಿ ಇಂದು ವಾಘಾ-ಅಟ್ಟಾರಿ ಗಡಿಯಲ್ಲಿ ಭಾರತ ಮತ್ತು ಪಾಕಿಸ್ಥಾನದ ಯೋಧರು ಪರಸ್ಪರ ಸಹಿ ವಿನಿಮಯ ಮಾಡಿಕೊಂಡಿದ್ದಾರೆ.
Delhi | Prime Minister Narendra Modi lays wreath at the National War Memorial on 73rd #RepublicDay pic.twitter.com/tQZiHlTTqA
— ANI (@ANI) January 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.