ನವದೆಹಲಿ: ಭಾರತದ ವೀರ ಪೊಲೀಸ್ ಸಿಬ್ಬಂದಿಯನ್ನು ಗುರುತಿಸಲು ಮತ್ತು ಗೌರವಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವವಾದ ಇಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು 115 ಶೌರ್ಯ ಪ್ರಶಸ್ತಿಗಳನ್ನು ಗೆದ್ದಿರುವುದು ಇಡೀ ರಾಷ್ಟ್ರಕ್ಕೆ ಅಪಾರ ಹೆಮ್ಮೆಯ ವಿಷಯವಾಗಿದೆ. ಇದು ಅವರ ಶೌರ್ಯ ಮತ್ತು ಬದ್ಧತೆಯನ್ನು ಬಿಂಬಿಸುತ್ತದೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಶಾ ಹೇಳಿದ್ದಾರೆ. ಈ ಮಹತ್ವದ ಸಾಧನೆಗಾಗಿ ಎಲ್ಲಾ ಪೊಲೀಸ್ ಸಿಬ್ಬಂದಿಯನ್ನು ಅಭಿನಂದಿಸಿ ಅವರ ಶೌರ್ಯಕ್ಕೆ ವಂದನೆ ಸಲ್ಲಿಸಿದರು.
ಎಎಸ್ಐ ಬಾಬು ರಾಮ್ ಅವರ ಅಪ್ರತಿಮ ಶೌರ್ಯ ಮತ್ತು ತ್ಯಾಗಕ್ಕೆ ಈ ಗಣರಾಜ್ಯೋತ್ಸವದಂದು ಅಶೋಕ ಚಕ್ರವನ್ನು ನೀಡಲಾಯಿತು. ಅವರ ಹೆಸರು ಪಡೆಗಳಿಗೆ ಮಾತ್ರವಲ್ಲದೆ ಎಲ್ಲಾ ಭಾರತೀಯರಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ ಎಂದಿದ್ದಾರೆ.
ಶ್ರೀನಗರದ ಹೊರವಲಯದಲ್ಲಿ ಭಯೋತ್ಪಾದಕರ ಗುಂಪಿನ ವಿರುದ್ಧ ಗುಪ್ತಚರ ಆಧಾರಿತ ಕಾರ್ಯಾಚರಣೆಯನ್ನು ಆರಂಭಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ತಂಡದ ಸದಸ್ಯ ಬಾಬು ರಾಮ್ ಮೂವರು ಭಯೋತ್ಪಾದಕರನ್ನು ಸದೆಬಡಿಯುವ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದ್ದು, ಸರ್ವೋಚ್ಚ ತ್ಯಾಗ ಮಾಡಿದರು ಎಂದು ಶಾ ಹೇಳಿದ್ದಾರೆ.
I congratulate all J&K Police personnel on this momentous achievement and salute their bravery. PM Narendra Modi led central government stands committed to recognising and honouring our brave police personnel: Union Home Minister Amit Shah
— ANI (@ANI) January 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.