ನವದೆಹಲಿ: ಹಾಕಿ ದಂತಕಥೆ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಚರಂಜಿತ್ ಸಿಂಗ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಹಾಕಿ ಇಂಡಿಯಾ ಗುರುವಾರ ಸಂತಾಪ ಸೂಚಿಸಿದೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇವರು 1964ರ ಟೊಕಿಯೋ ಒಲಿಂಪಿಕ್ಸ್ನಲ್ಲಿ ಬಂಗಾರದ ಪದಕ ಗೆದ್ದ ಭಾರತದ ಹಾಕಿ ತಂಡದ ನೇತೃತ್ವವನ್ನು ಚರಂಜಿತ್ ಸಿಂಗ್ ವಹಿಸಿದ್ದರು. ಫೈನಲ್ನಲ್ಲಿ ಪಾಕಿಸ್ಥಾನವನ್ನು ಸೋಲಿಸುವ ಮೂಲಕ ಭಾರತಕ್ಕೆ ಇಲ್ಲಿ ಬಂಗಾರದ ಪದಕ ಪ್ರಾಪ್ತವಾಗಿತ್ತು ಮತ್ತು ಇವರು 1960 ರ ರೋಮ್ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು.
20 ನವೆಂಬರ್ 1929 ರಂದು ಜನಿಸಿದ ಚರಂಜಿತ್ ಸಿಂಗ್ ಅವರು ಡೆಹ್ರಾಡೂನ್ನ ಕರ್ನಲ್ ಬ್ರೌನ್ ಕೇಂಬ್ರಿಡ್ಜ್ ಸ್ಕೂಲ್ ಮತ್ತು ಪಂಜಾಬ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿದ್ದರು. ಅಂತರಾಷ್ಟ್ರೀಯ ಹಾಕಿಯಲ್ಲಿ ವೃತ್ತಿಜೀವನದ ನಂತರ, ಅವರು ಶಿಮ್ಲಾದ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
“ದೇಶಕ್ಕಾಗಿ ಎರಡು ಪದಕಗಳನ್ನು ಗೆದ್ದಿರುವುದು ನನಗೆ ಹೆಮ್ಮೆ ಮತ್ತು ಗೌರವದ ಕ್ಷಣವಾಗಿದೆ. ನಿಮಗೆ ಗೊತ್ತಾ, 1964 ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ನಂತರ ನಾವು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ನಮಗೆ ಆತ್ಮೀಯ ಸ್ವಾಗತವನ್ನು ನೀಡಲಾಯಿತು, ಬಹಳಷ್ಟು ಅಭಿಮಾನಿಗಳು ಅಲ್ಲಿ ನೆರೆದಿದ್ದರು ಮತ್ತು ಇದು ನಮ್ಮಲ್ಲಿ ಪ್ರತಿಯೊಬ್ಬರಿಗೂ ಬಹಳ ವಿಶೇಷವಾದ ಭಾವನೆಯಾಗಿದೆ” ಎಂದು ಅವರು ಇತ್ತೀಚಿಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.
ಚರಂಜಿತ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಹಾಕಿ ಇಂಡಿಯಾ ಅಧ್ಯಕ್ಷ ಜ್ಞಾನೇಂದ್ರ ನಿಂಗೋಂಬಮ್, “ಇದು ಹಾಕಿ ಬಂಧುಗಳಿಗೆ ದುಃಖದ ದಿನವಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.