ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆರ್ಟಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಗೋಪೂಜೆಯನ್ನು ನೆರವೇರಿಸಿದ್ದಾರೆ.
ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ ಗೋಪೂಜೆ ನೆರವೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರಕ್ಕೆ ಬಂದು ಇಂದು 6 ತಿಂಗಳು ಪೂರೈಸಿದ ಸಂಭ್ರಮವನ್ನು ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ಶುಕ್ರವಾರ ಬಿಡುಗಡೆಗೊಳಿಸಲಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಆರು ತಿಂಗಳು ಪೂರೈಸಲಿರುವ ಹಿನ್ನಲೆಯಲ್ಲಿ “6 ತಿಂಗಳ ಜನಕಲ್ಯಾಣ ಸಮಾರಂಭ – ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು” ಕಾರ್ಯಕ್ರಮ ಜರುಗಲಿದೆ ಎಂದು ಬಿಜೆಪಿ ಹೇಳಿದೆ.
ಸಿಎಂ ಬೊಮ್ಮಾಯಿಯವರ 61ನೇ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಂಸದರು, ಶಾಸಕರು, ಬಿಜೆಪಿ ನಾಯಕರು, ವಿಪಕ್ಷ ನಾಯಕರು ಶುಭ ಕೋರಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. pic.twitter.com/2tQ9oBrBRW
— CM of Karnataka (@CMofKarnataka) January 28, 2022
ಇಂದು ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನ ಆರ್ ಟಿ ನಗರ್ ನಿವಾಸದಲ್ಲಿ ರಾಷ್ಟ್ರೋತ್ಥಾನ ಗೋಶಾಲೆಯ 11 ಹಸುಗಳನ್ನು ಆಜೀವನ ದತ್ತು ಸ್ವೀಕಾರ ಮಾಡಿ, ಗೋಮಾತೆಯ ಸೇವೆಯ ಪವಿತ್ರಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಟುಂಬದ ಸದಸ್ಯರೊಂದಿಗೆ ಗೋಪೂಜೆ ನೆರವೇರಿಸಲಾಯಿತು. pic.twitter.com/n7MsNYBHTF
— Basavaraj S Bommai (@BSBommai) January 28, 2022
Best wishes to Karnataka’s CM Shri @BSBommai Ji on his birthday. He is making outstanding efforts to boost Karnataka’s growth trajectory and ensure a life of dignity as well as prosperity for the poor. Praying for his long and healthy life.
— Narendra Modi (@narendramodi) January 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.