ನವದೆಹಲಿ: ಇಂದು ಲಾಲಾ ಲಜಪತ್ ರಾಯ್ ಅವರ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಧೈರ್ಯ, ಹೋರಾಟ ಮತ್ತು ಸಮರ್ಪಣೆಯನ್ನು ದೇಶವಾಸಿಗಳು ಸದಾ ಸ್ಮರಿಸುತ್ತಾರೆ ಎಂದು ಹೇಳಿದ್ದಾರೆ.
“ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು. ಸ್ವಾತಂತ್ರ್ಯ ಚಳುವಳಿಯಲ್ಲಿ ಅವರ ಧೈರ್ಯ, ಹೋರಾಟ ಮತ್ತು ಸಮರ್ಪಣಾ ಕಥೆಯನ್ನು ದೇಶವಾಸಿಗಳು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ” ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ.
ಜನವರಿ 28, 1865 ರಂದು ಜನಿಸಿದ ಲಾಲಾ ಲಜಪತ್ ರಾಯ್ ಅವರು ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲಾಲ್ ಬಾಲ್ ಪಾಲ್ ಎಂದೇ ಪ್ರಸಿದ್ಧರಾಗಿದ್ದ ಲಾಲಾ ಲಜಪತ್ ರಾಯ್, ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲ್ ಅವರಲ್ಲಿ ಇವರು ಒಬ್ಬರು. ಇವರು ಸಮಾಜ ಸುಧಾರಕರಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಅವರು ಬ್ರಿಟಿಷ್ ಆಳ್ವಿಕೆಯಿಂದ ಭಾರತಕ್ಕೆ ಸ್ವಾತಂತ್ರ್ಯವನ್ನು ನೀಡಲು ಅಪಾರ ಕೊಡುಗೆ ನೀಡಿದ್ದಾರೆ.
ಪಂಜಾಬ್ ಕೇಸರಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಲಜಪತ್ ರಾಯ್ ಒಬ್ಬ ಲೇಖಕ, ಕ್ರಾಂತಿಕಾರಿ ಮತ್ತು ರಾಜಕಾರಣಿ ಕೂಡ ಹೌದು. ಅವರು 1894 ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಲಕ್ಷ್ಮಿ ಇನ್ಶುರೆನ್ಸ್ ಕಂಪನಿಯ ಜೊತೆಗೆ ಸಂಬಂಧ ಹೊಂದಿದ್ದರು.
ಬ್ರಿಟಿಷ್ ಸೈಮನ್ ಆಯೋಗದ ವಿರುದ್ಧ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸಿದ ಸಂದರ್ಭ ಪೊಲೀಸರ ಲಾಠಿ ಚಾರ್ಜ್ನಲ್ಲಿ ತೀವ್ರ ಗಾಯಗೊಂಡ ಕೆಲವು ವಾರಗಳ ನಂತರ ಅವರು ನಿಧನರಾದರು.
पंजाब केसरी लाला लाजपत राय को उनकी जयंती पर सादर नमन। स्वतंत्रता आंदोलन में उनके साहस, संघर्ष और समर्पण की कहानी देशवासियों के लिए सदैव स्मरणीय रहेगी। pic.twitter.com/T3bm5dZMJ9
— Narendra Modi (@narendramodi) January 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.