ನವದೆಹಲಿ: ಭಾರತ ಮತ್ತು ಇಸ್ರೇಲ್ ಕೃಷಿ ವಲಯದಲ್ಲಿ ತಮ್ಮ ಸಹಕಾರವನ್ನು ಇನ್ನಷ್ಟು ಆಳಗೊಳಿಸಲು ನಿರ್ಧರಿಸಿವೆ. ಹೊಸದಾಗಿ ನೇಮಕಗೊಂಡ ಇಸ್ರೇಲಿ ರಾಯಭಾರಿ ನೌರ್ ಗಿಲೋನ್ ಅವರೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಭೆ ನಡೆಸಿದ್ದಾರೆ.
12 ರಾಜ್ಯಗಳಲ್ಲಿ 29 ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ಕಾರ್ಯನಿರ್ವಹಣೆಯ ಬಗ್ಗೆ ಸಭೆಯಲ್ಲಿ ತೋಮರ್ ಸಂತೋಷ ವ್ಯಕ್ತಪಡಿಸಿದ್ದಾರೆ. ಇವುಗಳು 25 ದಶಲಕ್ಷಕ್ಕೂ ಹೆಚ್ಚು ತರಕಾರಿಗಳನ್ನು ಉತ್ಪಾದಿಸುತ್ತಿದೆ, 387 ಸಾವಿರಕ್ಕೂ ಹೆಚ್ಚು ಗುಣಮಟ್ಟದ ಹಣ್ಣಿನ ಗಿಡಗಳನ್ನು ಬೆಳೆಸುತ್ತಿದೆ ಮತ್ತು ವರ್ಷಕ್ಕೆ 1.2 ಲಕ್ಷಕ್ಕೂ ಹೆಚ್ಚು ರೈತರಿಗೆ ತರಬೇತಿ ನೀಡುತ್ತಿದೆ.
ಇಸ್ರೇಲ್ನ ತಾಂತ್ರಿಕ ನೆರವಿನೊಂದಿಗೆ 150 ಗ್ರಾಮಗಳನ್ನು ಎಕ್ಸಲೆಂಟ್ ಗ್ರಾಮಗಳಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಅದರಲ್ಲಿ 75 ಗ್ರಾಮಗಳ ಕಾರ್ಯವನ್ನು ಭಾರತ ಸ್ವಾತಂತ್ರ್ಯದ 75 ನೇ ವರ್ಷದ ಸ್ಮರಣಾರ್ಥವಾಗಿ ಮೊದಲ ವರ್ಷದಲ್ಲೇ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಭಾರತ ಮತ್ತು ಇಸ್ರೇಲ್ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಕೃಷಿ ಸಚಿವಾಲಯದ ಪ್ರಕಟಣೆ ಶುಕ್ರವಾರ ತಿಳಿಸಿದೆ.
ಇಸ್ರೇಲ್ನ ರಾಯಭಾರಿ ಗಿಲೋನ್ ಸಹ ಸೆಂಟರ್ ಆಫ್ ಎಕ್ಸಲೆನ್ಸ್ ಕಾರ್ಯನಿರ್ವಹಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ, ಇವುಗಳು ಉಭಯ ದೇಶಗಳ ನಡುವಿನ ಸಹಕಾರಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.