ಬೆಂಗಳೂರು: ಜನವರಿ 31ರಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ರದ್ದು ಮಾಡಲಾಗಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಸಂಬಂಧಿಸಿದಂತೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಸಡಿಲಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ಪುನಾರಂಭವಾಗಲಿದೆ, 1-9ನೇ ತರಗತಿಯ ಭೌತಿಕ ತರಗತಿಗಳು ಆರಂಭವಾಗಲಿದೆ. ಪಬ್, ಬಾರ್, ರೆಸ್ಟೋರೆಂಟ್, ಹೊಟೇಲ್ಗಳು ಸಂಪೂರ್ಣವಾಗಿ ತೆರೆದಿರಲಿವೆ.
ಚಿತ್ರ ಮಂದಿರಗಳಲ್ಲಿ ಶೇ.50ರ ಅನುಮತಿ ಮುಂದುವರಿಯಲಿದೆ. ಸರ್ಕಾರಿ ಕಚೇರಿಗಳಲ್ಲಿ ಶೇ.100ರಷ್ಟು ನೌಕರರ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಜಿಮ್, ಈಜು ಕೊಳಗಳಲ್ಲಿ ಶೇ.50ರಷ್ಟು ಮಂದಿಗೆ ಅವಕಾಶ ಇರಲಿದೆ.
ಸಾರ್ವಜನಿಕ ಬಸ್ಗಳಲ್ಲಿ ಸೀಟು ಇದ್ದಷ್ಟು ಮಂದಿಗೆ ಅವಕಾಶ. ಮಂದಿರ, ಮಸೀದಿ ಹಾಗೂ ಚರ್ಚ್ಗಳಲ್ಲಿ ಪಾರ್ಥನೆ, ಪೂಜೆ ಆರಂಭವಾಗಲಿದೆ. ದೇವಾಲಯಗಳಲ್ಲಿ ಪ್ರವೇಶ ಮಿತಿ 50 ಜನ ನಿಯಮ ಮುಂದುವರಿಕೆಯಾಗಲಿದೆ. ಧಾರ್ಮಿಕ ಉತ್ಸವಗಳು, ಪ್ರತಿಭಟನೆಗೆ, ಜಾತ್ರೆ, ಉತ್ಸವ, ರ್ಯಾಲಿ, ಧರಣಿ ನಿರ್ಬಂಧ ಮುಂದುವರಿಕೆಯಾಗಲಿದೆ. ಮದುವೆ ಹಾಲ್ನಲ್ಲಿ 300 ಜನರಿಗೆ ಅವಕಾಶ ನೀಡಲಾಗುತ್ತದೆ.
ಸಭೆ, ಸಮಾರಂಭ ಒಳಾಂಗಣ ಮಿತಿ 200ಕ್ಕೆ ಏರಿಕೆಯಾಗಿದೆ. ಎಲ್ಲಾ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ತರಗತಿಯಲ್ಲಿ ಸೋಂಕು ಕಾಣಿಸಿಕೊಂಡರೆ ಆ ತರಗತಿ ಮಾತ್ರ ಬಂದ್ ಮಾಡಿ ಶಾಲೆ ಮುಂದುವರಿಕೆ ಆಗಲಿದೆ. ಶಾಲೆಯಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಡಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.