ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನವು ಆರಂಭವಾಗುತ್ತಿದೆ. ಎಂದಿನಂತೆ ಈ ಬಾರಿಯೂ ಪ್ರತಿ ಪಕ್ಷಗಳು ಸರ್ಕಾರದ ವಿರುದ್ಧ ದಾಳಿ ನಡೆಸಲು ಸಜ್ಜಾಗಿದ್ದು, ಪೆಗಾಸಸ್ ಸ್ನೂಪಿಂಗ್ ಆರೋಪಗಳು, ರೈತರ ಸಮಸ್ಯೆಗಳು ಮತ್ತು ಚೀನಾದೊಂದಿಗಿನ ಗಡಿ ವಿವಾದವನ್ನು ಎತ್ತುವ ಸಾಧ್ಯತೆ ಇದೆ.
ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ನಿರ್ಣಾಯಕ ವಿಧಾನಸಭೆ ಚುನಾವಣೆಯ ನಡುವೆಯೇ ಅಧಿವೇಶನ ನಡೆಯುತ್ತಿದ್ದು, ಇದಕ್ಕಾಗಿ ಪ್ರಚಾರವು ಭರದಿಂದ ಸಾಗಿದೆ, ಹಲವು ನಾಯಕರು ಪ್ರಚಾರದಲ್ಲಿ ನಿರತರಾಗಲಿದ್ದು, ಇದು ಸಂಸತ್ತಿನ ಕಲಾಪಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
2017 ರಲ್ಲಿ ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತವು ಸ್ನೂಪಿಂಗ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ನಂತರ ಪ್ರತಿಪಕ್ಷಗಳು ಈ ಪ್ರಕರಣದಲ್ಲಿ ಸರ್ಕಾರವನ್ನು ಒಗ್ಗಟ್ಟಿನಿಂದ ಎದುರಿಸಲು ತಯಾರಿ ನಡೆಸುತ್ತಿವೆ.
ಕಳೆದ ವರ್ಷ ಸಂಸತ್ತಿನ ಹೇಳಿಕೆಯೊಂದರಲ್ಲಿ ಸರ್ಕಾರವು “ಗೂಢಚಾರಿಕೆ” ಆರೋಪವನ್ನು ನಿರಾಕರಿಸುವ ಮೂಲಕ ಸದನ ದಾರಿ ತಪ್ಪಿಸುವ ಕೆಲಸ ಮಾಡಿದೆ. ಇದಕ್ಕಾಗಿ ಸರ್ಕಾರ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ವಿಶೇಷ ಹಕ್ಕು ಮಂಡಿಸಲು ಸ್ಪೀಕರ್ ಓಂ ಬಿರ್ಲಾ ಅವರಿಗೆ ಲೋಕಸಭೆಯ ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದಾರೆ.
ಕಳೆದ ಮಾನ್ಸೂನ್ ಅಧಿವೇಶವನ್ನೂ ಪೆಗಾಸಸ್ ಗಲಾಟೆಯು ವಾಶ್ಔಟ್ ಮಾಡಿತ್ತು, ಈ ಬಾರಿಯೂ ಇದೆ ಸಂಭವಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.