ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಚುನಾವಣಾ ಅಖಾಡ ಉತ್ತರಪ್ರದೇಶದಲ್ಲಿ ಪ್ರಚಾರ ಕಾರ್ಯಕ್ಕೆ ಧುಮುಕಲಿದ್ದು, ಐದು ಜಿಲ್ಲೆಗಳಲ್ಲಿ ವರ್ಚುವಲ್ ರ್ಯಾಲಿ ನಡೆಸಲಿದ್ದಾರೆ.
ಶಾಮ್ಲಿ, ಮುಝಾಫರ್ನಗರ, ಬಾಗ್ಪತ್, ಸಹರಾನ್ಪುರ್, ಗೌತಮಬುದ್ಧ ನಗರ (ದಾದ್ರಿ/ಜೇವಾರ್) ಮತ್ತು 21 ವಿಧಾನ ಸಭಾ ಸ್ಥಾನಗಳನ್ನು ಒಳಗೊಂಡು ಮೋದಿಯವರ ವರ್ಚುವಲ್ ರ್ಯಾಲಿ ನಡೆಯಲಿದೆ.
ವಿಧಾನಸಭೆ ಚುನಾವಣೆಯ ದಿನಾಂಕಗಳು ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮಾಡಲಿರುವ ಮೊದಲ ಭಾಷಣ ಇದಾಗಿದೆ. ಕೋವಿಡ್-19 ಹರಡುವಿಕೆಯ ಹಿನ್ನೆಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು, 98 ಮಂಡಲಗಳಾದ್ಯಂತ 100 ಸ್ಥಳಗಳಲ್ಲಿ ಪ್ರಧಾನಿ ಮೋದಿಯವರ ಭಾಷಣವನ್ನು ಕೇಳಲು ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿ ಸ್ಥಳದಲ್ಲಿ 500 ಜನರನ್ನು ಒಳಗೊಂಡಂತೆ ಒಟ್ಟು 50,000 ವರ್ಚುವಲ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಎಲ್ಇಡಿ ಪರದೆಗಳು ಮತ್ತು ಪ್ರಚಾರ ವ್ಯಾನ್ಗಳನ್ನು ಈ ಸ್ಥಳಗಳಿಗೆ ಜನರು ಪ್ರಧಾನ ಮಂತ್ರಿಯ ಭಾಷಣವನ್ನು ಕೇಳಲು ಕಳುಹಿಸಲಾಗುತ್ತಿದೆ.
ಬೃಹತ್ ಡಿಜಿಟಲ್ ಹೆಜ್ಜೆಗುರುತನ್ನು ಹೊಂದಿರುವ ಬಿಜೆಪಿ ಈ 21 ವಿಧಾನಸಭಾ ಕ್ಷೇತ್ರಗಳಲ್ಲಿ ಜನರನ್ನು ತಲುಪಲು ಫೇಸ್ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ ಸೇರಿದಂತೆ ತನ್ನ ಎಲ್ಲಾ ಸಾಮಾಜಿಕ ಜಾಲತಾಣಗಳನ್ನು ಸಕ್ರಿಯ ರೀತಿಯಲ್ಲಿ ಬಳಸುತ್ತಿದೆ.
ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆ ಫೆಬ್ರವರಿ 10 ರಂದು ಮತ್ತು ಕೊನೆಯ ಹಂತ ಮಾರ್ಚ್ 7 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.