ಥಾಣೆ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿರುವ ಕೇಂದ್ರ ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಪಾಟೀಲ್, 2024 ರ ವೇಳೆಗೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ನಗರದಲ್ಲಿ ಶನಿವಾರ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “2024 ರ ವೇಳೆಗೆ ಪಿಒಕೆ ಭಾರತದಲ್ಲಿ ಏಕೀಕರಣಗೊಳ್ಳಲಿದೆ ಎಂದು ಭಾವಿಸುತ್ತೇನೆ. ಏಕೆಂದರೆ ಈ ಕೆಲಸಗಳನ್ನು ಪ್ರಧಾನಿ ಮೋದಿಯಿಂದ ಮಾತ್ರ ಮಾಡಲು ಸಾಧ್ಯ. ಇದಕ್ಕಾಗಿ ನಾವು ಆಲೂಗಡ್ಡೆ, ಈರುಳ್ಳಿ, ಬೇಳೆಕಾಳುಗಳ ಮನಸ್ಥಿತಿಯಿಂದ ಹೊರಬರಬೇಕಾಗಿದೆ” ಎಂದಿದ್ದಾರೆ.
ಭಿವಂಡಿಯ ಬಿಜೆಪಿ ಲೋಕಸಭಾ ಸಂಸದರಾಗಿರುವ ಪಾಟೀಲ್, 2015 ರಲ್ಲಿ ಕಾಶ್ಮೀರ ವಿಷಯದ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಿ ನೀಡಿದ ಹೇಳಿಕೆಯನ್ನು ನೆನಪಿಸಿಕೊಂಡಡಿದ್ದಾರೆ.
“ಪಿಒಕೆ ದೇಶದ ದೊಡ್ಡ ಸಮಸ್ಯೆ ಎಂದು ಹೇಳಿದ್ದರು. ಒಂದಲ್ಲ ಒಂದು ಹಂತದಲ್ಲಿ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳಬೇಕಾಗುತ್ತದೆ, ಆಗ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾಜಿ ಪ್ರಧಾನಿ ನರಸಿಂಹರಾವ್ ಅವರು ಹೇಳಿದ್ದರು ಎಂಬುದಾಗಿ ಪ್ರಧಾನಿ ಮೋದಿ ರಾಜ್ಯಸಭೆಯಲ್ಲಿ ಹೇಳಿ, ಕಾಂಗ್ರೆಸ್ನತ್ತ ಬೊಟ್ಟು ಮಾಡಿ ನೀವು ಇದನ್ನು ಮಾಡಲು ಸಾಧ್ಯವಿಲ್ಲ, ಆದರೆ ನಾನು ಮಾಡುತ್ತಿದ್ದೇನೆ ಎಂದು ಹೇಳಿದ್ದರು” ಎಂದು ಪಾಟೀಲ್ ಹೇಳಿದ್ದಾರೆ.
#WATCH | Thane, Maharashtra: Union Minister & BJP leader Kapil Patil says, "…Hope PoK (Pakistan Occupied Kashmir) is integrated in India by 2024 as these things can be done only by PM Modi. For this we'll have to come out of (the mindset for) potato, onions, pulses." (29.01.22) pic.twitter.com/H3dKO5aBd6
— ANI (@ANI) January 31, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.