ನವದೆಹಲಿ: ಚುನಾವಣಾ ಆಯೋಗವು ಇಂದು ಐದು ಚುನಾವಣೆಗೆ ಒಳಪಟ್ಟ ರಾಜ್ಯಗಳಲ್ಲಿ ಚುನಾವಣಾ ಸಮಾವೇಶ ನಡೆಸುವುದರ ಮೇಲೆ ವಿಧಿಸಿದ ನಿಷೇಧವನ್ನು ಫೆಬ್ರವರಿ 11 ರವರೆಗೆ ವಿಸ್ತರಿಸಿದೆ. ಆಯೋಗವು ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಭೌತಿಕವಾಗಿ ಸಮಾವೇಶ ನಡೆಸುವುದರ ಮೇಲಿನ ನಿಷೇಧವನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಮತ್ತು ಅನುಪ್ ಚಂದ್ರ ಪಾಂಡೆ ಅವರ ಜೊತೆಗೂಡಿ ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯ ಕುರಿತು ಮತ್ತೊಮ್ಮೆ ಸಮಗ್ರ ಪರಿಶೀಲನೆ ನಡೆಸಿದ ನಂತರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.
ಆದರೆ, ಭೌತಿಕ ಸಾರ್ವಜನಿಕ ಸಭೆಗಳು, ಒಳಾಂಗಣ ಸಭೆಗಳು ಮತ್ತು ಮನೆ ಮನೆ ಪ್ರಚಾರಕ್ಕೆ ಇದ್ದ ಕೆಲವು ನಿರ್ಬಂಧಗಳನ್ನು ಸಡಿಲಿಸಿದೆ.
ಗರಿಷ್ಠ 1000 ಜನರನ್ನು ಸೇರಿಸಿ ಸಮಾವೇಶ ನಡೆಸಬಹುದು, ಗರಿಷ್ಠ 500 ಜನರನ್ನು ಒಳಗೊಂಡು ಒಳಾಂಗಣ ಸಭೆಗಳಿಗೆ ಅನುಮತಿ ನೀಡುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಮನೆ-ಮನೆ ಪ್ರಚಾರಕ್ಕೆ ಇಪ್ಪತ್ತು ಮಂದಿಗೆ ಅವಕಾಶ ಕಲ್ಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.