ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ತಮ್ಮ ನಾಲ್ಕನೇ ನೇರ ಬಜೆಟ್ ಅನ್ನು ಮಂಡಿಸಿದರು.
ಜನಸ್ನೇಹಿ ಬಜೆಟ್ಗಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಇದು ಬಡವರ ಕಲ್ಯಾಣಕ್ಕಾಗಿನ ಬಜೆಟ್ ಎಂದಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಮೂಲಕ ಅವರು ಬಜೆಟ್ ಬಗ್ಗೆ ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದಾರೆ.
“ಈ ಬಜೆಟ್ ಅಭಿವೃದ್ಧಿಯ ಹೊಸ ವಿಶ್ವಾಸವನ್ನು ಹೊತ್ತು ತಂದಿದೆ. ಅರ್ಥವ್ಯವಸ್ಥೆಗೆ ಬಲಿಷ್ಠತೆ ನೀಡುವ ಜೊತೆಗೆ ಸಾಮಾನ್ಯ ಜನರಿಗೆ ಅನೇಕ ಅವಕಾಶಗಳನ್ನು ಹೊಂದಿದೆ. ಹೆಚ್ಚು ಮೂಲಭೂತ ಸೌಕರ್ಯ, ಹೆಚ್ಚು ಹೂಡಿಕೆ, ಹೆಚ್ಚು ಪ್ರಗತಿ, ಹೆಚ್ಚು ಉದ್ಯೋಗವಕಾಶಗಳ ಸಂಭವನೀಯತೆಯನ್ನು ಸೃಷ್ಟಿಸಿದೆ. ಹಸಿರು ಉದ್ಯೋಗದ ಅವಕಾಶಗಳನ್ನು ತಂದಿದೆ. ದೇಶದ ಯುವಕರ ಉಜ್ವಲ ಭವಿಷ್ಯವನ್ನು ಸುನಿಶ್ಚಿತಗೊಳಿಸಿದೆ. ಎಲ್ಲಾ ವಲಯದವರು ಬಜೆಟ್ ಅನ್ನು ಕೊಂಡಾಡಿದ್ದಾರೆ. ಜನಸಾಮಾನ್ಯರ ಸಕಾರಾತ್ಮಕ ಪ್ರತಿಕ್ರಿಯೆ ಜನ ಸೇವೆಯ ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ” ಎಂದಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಪ್ರಾರಂಭವಾಯಿತು. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ನಡೆಯಲಿದೆ ಮತ್ತು ಎರಡನೇ ಭಾಗವು ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ.
Speaking on #AatmanirbharBharatKaBudget 2022. https://t.co/vqr6tNskoD
— Narendra Modi (@narendramodi) February 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.