ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಬಜೆಟ್ 2022-23 ಹಿನ್ನೆಲೆಯಲ್ಲಿ ‘ಆತ್ಮನಿರ್ಭರ ಅರ್ಥವ್ಯವಸ್ಥೆʼ ಕುರಿತು ಇಂದು ದೇಶದಾದ್ಯಂತ ಇರುವ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ವರ್ಚುವಲ್ ಆಗಿ ಇಂದು ಮಾತನಾಡಿದರು.
“ಈ ಬಜೆಟ್ ಬಡವರು, ಮಧ್ಯಮ ವರ್ಗದವರು ಮತ್ತು ಯುವಜನತೆಯ ಮೇಲೆ ಕೇಂದ್ರೀಕರಿಸಿದೆ ಮತ್ತು ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ನಮ್ಮ ಸರ್ಕಾರವು ಮೂಲ ಸೌಕರ್ಯಗಳ ಒದಗಿಸುವಿಕೆಗಾಗಿ ಕೆಲಸ ಮಾಡುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ನಮ್ಮ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸುವತ್ತ ಕಾರ್ಯೋನ್ಮಖವಾಗಿದೆ. ಬಿಜೆಪಿ ಸರ್ಕಾರದ ಪ್ರಯತ್ನಗಳಿಂದಾಗಿ ಇಂದು ದೇಶ ಸುಮಾರು 9 ಕೋಟಿ ಗ್ರಾಮೀಣ ಮನೆಗಳಿಗೆ ಶುದ್ಧ ನಲ್ಲಿ ನೀರನ್ನು ತಲುಪಿಸುತ್ತಿದೆ. ಇದರಲ್ಲಿ ಸುಮಾರು 5 ಕೋಟಿಗೂ ಅಧಿಕ ನೀರಿನ ಸಂಪರ್ಕವನ್ನು ಜಲಜೀವನ್ ಮಿಷನ್ ಅಡಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒದಗಿಸಲಾಗಿದೆ” ಎಂದಿದ್ದಾರೆ.
“ಬಜೆಟ್ನಲ್ಲಿ ಘೋಷಿಸಲಾದ ಪರ್ವತ್ ಮಾಲಾ ಹಿಮಾಲಯ ಪ್ರದೇಶದಲ್ಲಿ ಆಧುನಿಕ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಒದಗಿಸುತ್ತದೆ. ಇದು ಬೆಟ್ಟಗಳಿಗೆ ಪ್ರವಾಸಿಗರು, ಯಾತ್ರಿಕರು ಮತ್ತು ಮುಖ್ಯವಾಗಿ ನಮ್ಮ ರಕ್ಷಣಾ ಪಡೆಗಳಿಗೆ ಪ್ರವೇಶವನ್ನು ಸುಗಮಗೊಳಿಸುತ್ತದೆ” ಎಂದಿದ್ದಾರೆ.
“ಭಾರತದ ಕೃಷಿಯನ್ನು ಆಧುನಿಕವಾಗಿಸುವುದು, ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುವುದು, ರೈತರ ಮೇಲಿನ ಹೊರೆ ಕಡಿಮೆ ಮಾಡುವುದು ಇಂದಿನ ಅಗತ್ಯವಾಗಿದೆ. ದೇಶದ ಕೃಷಿಯನ್ನು ತಂತ್ರಜ್ಞಾನ ಆಧಾರಿತವಾಗಿಸಲು ಮತ್ತು ರಾಸಾಯನಿಕ ಮುಕ್ತಗೊಳಿಸಲು ಈ ಬಜೆಟ್ನಲ್ಲಿ ದೊಡ್ಡ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಡ್ರೋನ್ ತಂತ್ರಜ್ಞಾನವು ರೈತನಿಗೆ ಸಹಾಯ ಮಾಡುವುದಲ್ಲದೆ, ಉತ್ಪಾದನೆಯ ನೈಜ ಸಮಯದ ಡೇಟಾವನ್ನು ಸಹ ಲಭ್ಯಗೊಳಿಸುತ್ತದೆ” ಎಂದಿದ್ದಾರೆ.
#WATCH Live: PM Narendra Modi speaks on #UnionBudget2022
(Source: BJP) https://t.co/UrdiPUcIyF
— ANI (@ANI) February 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.