ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಸೈಕಲ್ ಮೂಲಕ ಸಂಸತ್ತಿಗೆ ಆಗಮಿಸಿದ್ದಾರೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಸೈಕಲ್ ಸವಾರಿ ಮೂಲಕ ಜನತೆಗೆ ಮಾಲಿನ್ಯ ತಡೆಗೆ ಸಂದೇಶ ನೀಡಿದ್ದಾರೆ. ಸೈಕಲ್ ಸವಾರಿ ವೇಳೆ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಮ ಪಾಲನೆ ಕುರಿತು ಕೂಡ ಅವರು ಜಾಗೃತಿ ಮೂಡಿಸಿದ್ದಾರೆ.
ಮಾಂಡವೀಯಾ ಅವರು ಸೈಕಲ್ ಮೂಲಕ ಸವಾರಿ ಮಾಡುತ್ತಿರುವುದು ಇದೇ ಮೊದಲಲ್ಲ. ಹಿಂದೆ ಕೂಡ ಅವರು ಸೈಕಲ್ ಮೂಲಕ ಸಂಚರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದಾರೆ.
2011ರ ನವೆಂಬರ್ನಲ್ಲಿ ಅವರು ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳದಲ್ಲಿನ ಹೆಲ್ತ್ ಪೆವಿಲಿಯನ್ ಅನ್ನು ಉದ್ಘಾಟಿಸಲು ಸೈಕಲ್ ಮೂಲಕ ಆಗಮಿಸಿದ್ದರು. ಈ ಮೂಲಕ ಅವರು ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ್ದರು.
#WATCH | Union Health Minister Mansukh Mandaviya rides a bicycle to Parliament in New Delhi pic.twitter.com/OCW3K896WC
— ANI (@ANI) February 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.