ಬೆಂಗಳೂರು : ರಾಜ್ಯದ ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆಯಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಅರಣ್ಯ ಇಲಾಖೆ ಪರಿಶೀಲನಾ ಸಭೆ ತೀರ್ಮಾನಿಸಿತು.
ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ಸಮಿತಿ ರಚನೆಯಾಗಲಿದೆ. ಸಮಿತಿಯು ನಿಗದಿತ ಸಮಯದೊಳಗೆ ಅನುಮೋದನೆಗಳನ್ನು ನೀಡುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಪರಿಸರ ನಷ್ಟಕ್ಕೆ ತಡೆ: ಕಳೆದ 5 ವರ್ಷಗಳಲ್ಲಿ ರಾಜ್ಯದ ಪರಿಸರದಲ್ಲಿ ಉಂಟಾಗಿರುವ ನಷ್ಟವನ್ನು ಮೌಲ್ಯಮಾಪನ ಮಾಡಿ ಐಸೆಕ್ ಸಂಸ್ಥೆ ಹೊರತಂದಿರುವ ವರದಿಯನ್ನು ಆಧರಿಸಿ ಪರಿಸರ ನಷ್ಟವನ್ನು ತಡೆಗಟ್ಟಲು ಹಾಗೂ ನಷ್ಟವನ್ನು ಸರಿದೂಗಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪರಿಸರ ಮತ್ತು ಆರ್ಥಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಪರಿಸರ ಬಜೆಟ್ ರೂಪಿಸಲು ಮುಖ್ಯಮಂತ್ರಿಗಳು ತಿಳಿಸಿದರು.
ಕೃಷಿ ಅರಣ್ಯೀಕರಣ (ಆಗ್ರೋ ಫಾರೆಸ್ಟರಿ): ಕೃಷಿ ಅರಣ್ಯೀಕರಣದಿಂದ ಹಸಿರು ಹೆಚ್ಚಾಗಿ, ಮಣ್ಣಿನ ಫಲವತ್ತೆಯೂ ಹೆಚ್ಚಾಗುತ್ತದೆ. ಮರ ಗಿಡಗಳನ್ನು ಬೆಳೆಸುವುದರಿಂದ ಕೃಷಿಯೇತರ ಚಟುವಟಿಕೆಗಳು ಹಾಗೂ ಪ್ರಾಣಿಗಳಿಗೂ ಆಹಾರ ಹಾಗೂ ಮೇವು ದೊರೆಯುತ್ತದೆ. ಜನರಲ್ಲಿ ಅರಣ್ಯೀಕರಣದ ಬಗ್ಗೆ ಜಾಗೃತಿ ಮೂಡಿ ವಿವಿಧ ಉದ್ದೇಶಗಳು ಈಡೇರಿದಂತಾಗುತ್ತದೆ. ಈ ಉದ್ದೇಶಕ್ಕಾಗಿ ಜಲಾನಯನ ಅಭಿವೃದ್ಧಿ ಪ್ರದೇಶಕ್ಕೆ ಸರ್ಕಾರ ನೀಡುವ ಅನುದಾನವನ್ನು ಬಳಸಿ ಗುರಿಯನ್ನು ತಲುಪುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮಾನವ ಹಾಗೂ ವನ್ಯ ಪ್ರಾಣಿಗಳ ಸಂಘರ್ಷ: ಮಾನವ ಹಾಗೂ ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಲು ರೈಲ್ವೆ ತಡೆಗೋಡೆ ನಿರ್ಮಾಣ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಂಡು ಬೆಳೆಹಾನಿ ಹಾಗೂ ಪ್ರಾಣಹಾನಿಯನ್ನು ತಪ್ಪಿಸಲು ಕ್ರಮಕೈಗೊಳ್ಳಲು ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.