ಬೆಂಗಳೂರು : ಬೆಳೆ ವಿಮೆಗೆ ನೋಂದಾಯಿತ ಅರ್ಹ ಫಲಾನುಭವಿಗಳು ಮರಣ ಹೊಂದಿದಲ್ಲಿ ಆ ರೈತರುಗಳ ಬೆಳೆವಿಮೆ ಪರಿಹಾರವನ್ನು ಸರಿಯಾದ ವಾರಸುದಾರರಿಗೆ (ನಾಮಿನಿ) ಪಾವತಿಸುವ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಹಾಗೂ ನೊಂದಣಿ ಸಮಯದಲ್ಲಿಯೇ ನಾಮಿನಿಯ ಹೆಸರನ್ನು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.
ಕೃಷಿ ಸಚಿವ ಬಿ. ಸಿ. ಪಾಟೀಲ್ ಹೆಬ್ಬಾಳದ ಬೀಜ ನಿಗಮ ಕಚೇರಿಯ ಪ್ರಾಂಗಣದಲ್ಲಿ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ವಿಮಾ ಸಂಸ್ಥೆಗಳು ಜಿಲ್ಲಾ ಮಟ್ಟದಲ್ಲಿ, ಸ್ವಂತ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಕಡ್ಡಾಯವಾಗಿ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಿ, ರೈತರಿಗೆ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯ ಜೋಡಣೆ ಕುರಿತು ಜಾಗೃತಿ ಮೂಡಿಸಬೇಕು. ವಿಮಾ ಪರಿಹಾರ ಇತ್ಯರ್ಥಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ವಿಮಾ ಕಂಪೆನಿಗಳಿಗೆ ಸಭೆಯಲ್ಲಿ ಸಚಿವರು ಖಡಕ್ ಸೂಚನೆ ನೀಡಿದರು.
ಅಲ್ಲದೇ ಸಭೆಯಲ್ಲಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯ ಜೋಡಣೆ ಹಾಗೂ NPCI Active ಇರುವುದನ್ನು ಖಚತಪಡಿಸಿಕೊಂಡು ಅರ್ಜಿಯನ್ನು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಎಲ್ಲಾ ಬಾಂಕುಗಳಿಗೆ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿ ( CSC ) ಗೆ ಸೂಚಿಸಿದರು.
ನಿಗಧಿಯಾಗಿರುವ ಎಸ್.ಎಲ್.ಬಿ.ಎಸ್ . ( SLBC ) ಬ್ಯಾಂಕರ್ ಗಳ ಸಭೆಯಲಿ NPCI ನಿಂದ ವಿಫಲವಾದ ಬೆಳೆ ವಿಮೆಯ ಪರಿಹಾರ ಮೊತ್ತ ಇತ್ಯರ್ಥ ಪ್ರಕರಣಗಳ ಕುರಿತು ಹಾಗೂ ಬೆಳೆ ಸಮೀಕ್ಷೆಯ ತಾಳೆಯಾಗದ ಪ್ರಕರಣಗಳ ಪರಿಶೀಲನಾ ಕಾರ್ಯವನ್ನು ಅತೀ ಶೀಘ್ರವಾಗಿ ಕೈಗೊಳ್ಳಲು ಸೂಕ್ತ ಸಲಹೆಗಳನ್ನು ಎಲ್ಲಾ ಕೆಳಹಂತದ ಬ್ಯಾಂಕ್ ಶಾಖೆಗಳಿಗೆ ನಿರ್ದೇಶನ ನೀಡಬೇಕು. NPCI ನಿಂದ ಬೆಳೆ ವಿಮೆ ಪರಿಹಾರ ಮೊತ್ತ ಇತ್ಯರ್ಥ ವಿಳಂಬವಿಲ್ಲದೇ ಪಾವತಿಸಲು ಬೇಕಾದ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು SLBC ರವರಿಗೆ ಬಿ.ಸಿ.ಪಾಟೀಲ್ ಹೇಳಿದರು.
2022-23 ರ ಮುಂಗಾರು ಹಂಗಾಮಿನಿಂದ ಕಡ್ಡಾಯವಾಗಿ ಬೆಳೆ ಸಮೀಕ್ಷೆಯನ್ನು ರೈತರೇ ಸ್ವತಃ ಮಾಡಲು ಮುಂದಾಗಬೇಕೆಂದು ಮನವಿ ಮಾಡಿದ ಬಿ.ಸಿ.ಪಾಟೀಲ್, NPCI ನಿಂದ ಬೆಳೆ ವಿಮೆ ಪರಿಹಾರ ಪಾವತಿಸಲು ಬಾಕಿ ಇರುವ ಪ್ರಕರಣಗಳ ಇತ್ಯರ್ಥ ಕುರಿತು ವಿಮಾ ಸಂಸ್ಥೆಗಳು ತಾಲೂಕು ಸಂಯೋಜಕರುಗಳ ಮೂಲಕ ಫಲಾನುಭವಿಗಳಿಗೆ ಮುಂದಿನ ಕ್ರಮ ಕುರಿತು ಮಾಹಿತಿ ನೀಡಬೇಕು.ಹಂಗಾಮುವಾರು ಬೆಳೆ ವಿಮೆ ಪರಿಹಾರ ಮೊತ್ತವನ್ನು ಯಾವುದೇ ವಿಳಂಭ ಮಾಡದೇ ಕಾಲಕಾಲಕ್ಕೆ ಸರಿಯಾಗಿ ಪಾವತಿಸಬೇಕೆಂದು ವಿಮಾ ಸಂಸ್ಥೆಗಳಿಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.