ಬೆಂಗಳೂರು: ಪದಕ ಗೆಲ್ಲುವ ಪ್ರತಿಭೆ, ಸಾಮರ್ಥ್ಯವಿದ್ದರೂ ಸೂಕ್ತ ವೇದಿಕೆ ಇಲ್ಲದೇ ಎಲೆಮರೆ ಕಾಯಿಯಂತಿದ್ದ ಸಿದ್ದಿ ಜನಾಂಗದ ಮಕ್ಕಳನ್ನು ಗುರುತಿಸಿ ತರಬೇತಿ ನೀಡುತ್ತಿರುವುದು ಫಲ ನೀಡುತ್ತಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪಾಂಡಿಚೆರಿಯಲ್ಲಿ ನಡೆದ 3 ನೇ ಜಯನ್ ಬಾಕ್ಸಿಂಗ್ ಫೆಸ್ಟಿವಲ್ 2022ರಲ್ಲಿ ಸಿದ್ದಿ ಜನಾಂಗದ ಕ್ರೀಡಾಪಟುಗಳು ಏಳು ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಆರ್. ಜಯನ್ ಬಾಕ್ಸಿಂಗ್ ಫೆಸ್ಟಿವಲ್ ವಲ್ನಲ್ಲಿ ವಿದ್ಯಾನಗರದ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿ ಪಡೆಯುತ್ತಿರುವ ಸಿದ್ದಿ ಜನಾಂಗದ 8 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಏಳು ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.
ಜೋಸೆಫ್ ಬಸ್ತಾವೋನಾ(Elite 71-75 ಕೆಜಿ ವಿಭಾಗ), ಸ್ಟೀವನ್ ಸಂಜನ್ ಸಲಗಟ್ಟಿ(youth 54-57 ಕೆಜಿ ವಿಭಾಗ) ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ವಿಜೇತರಾಗಿದ್ದಾರೆ.
ದರ್ಶನ್ ಮಹಾಬಲೇಶ್ವರ ಸಿದ್ದಿ(youth 67-71 Kg), ದಿನೇಶ್ ಶಂಕರ್ ಸಿದ್ದಿ youth 48-50_Kg ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಿಖಿಲ್ ಮರಿಯನ್ ಸಿದ್ದಿ(youth 50-52Kg), ಕಿರಣ್ ಸಂಜನ್ ಸಲಗಟ್ಟಿ(Junior 50-52 kg), ಹಜರತ್ ಆಲಿ Junior 42-44 ಕೆಜಿ ವಿಭಾಗದಲ್ಲಿ ಕಂಚು ಪದಕವನ್ನು ವಿಜೇತರಾಗಿದ್ದಾರೆ.
ವಿದ್ಯಾನಗರ ಕ್ರೀಡಾ ವಸತಿ ಶಾಲೆಯ ಜೋಸೆಫ್ ಬಸ್ತಾವೊನಾ ಅವರು ಬೆಸ್ಟ್ ಬಾಕ್ಸರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಸಿದ್ದಿ ಜನಾಂಗದ ಮಕ್ಕಳಿಗೆ ವಿಶೇಷ ಸಾಮರ್ಥ್ಯವಿದೆ. ಅದರೆ ಅವರಿಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ, ಸಿದ್ದಿ ಜನಾಂಗದದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿಯೇ ಉತ್ತಮ ತರಬೇತಿ ಪಡೆದು ಪಾಂಡಿಚೇರಿಯಲ್ಲಿ ನಡೆದ ಬಾಕ್ಸಿಂಗ್ ಟೂರ್ನಮೆಂಟ್ನಲ್ಲಿ ಉತ್ತಮ ಪ್ರದರ್ಶನ ನೀಡಿ 8 ಕ್ರೀಡಾಪಟುಗಳ ಪೈಕಿ ಏಳು ಮಂದಿ ಪದಕ ಗೆದ್ದಿದ್ದಾರೆ. ಇದು ಆರಂಭ ಅಷ್ಟೇ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ಹಲವು ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿದ್ದಾರೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.