ನವದೆಹಲಿ: ಪಾಕಿಸ್ಥಾನದ ಡೀಲರ್ನ ಕಾಶ್ಮೀರದ ಬಗೆಗಿನ ವಿವಾದಾತ್ಮಕ ಟ್ವೀಟ್ ಹ್ಯುಂಡೈ ಸಂಸ್ಥೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಭಾರತೀಯರ ತೀವ್ರ ಆಕ್ರೋಶವನ್ನು ಅದು ಪ್ರಸ್ತುತ ಎದುರಿಸುತ್ತಿದೆ. ವಿವಾದದ ಬಗ್ಗೆ ಹ್ಯುಂಡೈ ಮೋಟಾರ್ ಇಂಡಿಯಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯತೆಯನ್ನು ಗೌರವಿಸುವ ನೀತಿಯ ಮೇಲೆ ಬಲವಾಗಿ ನಿಂತಿರುವುದಾಗಿ ಹೇಳಿದೆ.
ಹ್ಯುಂಡೈ ಅನ್ನು ಬಹಿಷ್ಕರಿಸಲು ಮತ್ತು ಹುಂಡೈ ಕಾರುಗಳನ್ನು ಖರೀದಿಸುವುದನ್ನು ನಿಲ್ಲಿಸಲು ಸಾಮಾಜಿಕ ಮಾಧ್ಯಮದಲ್ಲಿ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಯುತ್ತಿದೆ. ಇದರಿಂದ ದಕ್ಷಿಣ ಕೊರಿಯಾದ ದೈತ್ಯ ಮತ್ತು ಭಾರತದ ಎರಡನೇ ಅತಿದೊಡ್ಡ ಕಾರು ತಯಾರಕ ಹ್ಯುಂಡೈ ತೀವ್ರ ಹಿನ್ನೆಡೆ ಅನುಭವಿಸುತ್ತಿದೆ.
ಪಾಕಿಸ್ಥಾನದಲ್ಲಿ@hyundaiPakistanOfficial ಎಂಬ ಹ್ಯಾಂಡಲ್ ಹೊಂದಿರುವ ಹುಂಡೈನ ಡೀಲರ್ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುವ ಸಂದೇಶವನ್ನು ಪೋಸ್ಟ್ ಮಾಡಿದ್ದಾನೆ. ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಲು ಈ ಟ್ವೀಟ್ ಮಾಡಲಾಗಿದೆ. “ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿರುವ ಕಾಶ್ಮೀರಿ ಸಹೋದರರಿಗೆ ನಮ್ಮ ಬೆಂಬಲವಿದೆ” ಎಂದು ಟ್ವಿಟ್ನಲ್ಲಿ ಹೇಳಲಾಗಿದೆ. ಇದು ಭಾರತದಲ್ಲಿ ಕಿಡಿ ಹೊತ್ತಿಸಿದ್ದು #BoycottHyundai ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ ಮತ್ತು ದೇಶದಲ್ಲಿ ಕಂಪನಿಯ ಉತ್ಪನ್ನಗಳನ್ನು ಖರೀದಿಸುವುದನ್ನು ನಿಲ್ಲಿಸುವಂತೆ ಅನೇಕ ಜನರು ಕರೆ ನೀಡುತ್ತಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹ್ಯುಂಡೈ ಇಂಡಿಯಾ, “ಹ್ಯುಂಡೈ ಮೋಟಾರ್ಇಂಡಿಯಾ ಈಗ 25 ವರ್ಷಗಳಿಂದ ಭಾರತೀಯ ಮಾರುಕಟ್ಟೆಗೆ ಬದ್ಧವಾಗಿದೆ ಮತ್ತು ರಾಷ್ಟ್ರೀಯತೆಯನ್ನು ಗೌರವಿಸುವ ನಮ್ಮ ಬಲವಾದ ನೀತಿಗಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಅಪರಾಧವಾಗಿದೆ. ಈ ಮಹಾನ್ ದೇಶಕ್ಕೆ ಬದ್ಧತೆ ಮತ್ತು ಸೇವೆ ಒದಗಿಸಲು ಬದ್ಧರಾಗಿದ್ದೇವೆ” ಎಂದಿದೆ.
Official Statement from Hyundai Motor India Ltd.#Hyundai #HyundaiIndia pic.twitter.com/dDsdFXbaOd
— Hyundai India (@HyundaiIndia) February 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.