ಬಿಜ್ನೋರ್: ಹಿಂದಿನ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರವು ಉತ್ತರಪ್ರದೇಶದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಬಿಜ್ನೋರ್ಗಾಗಿ ವರ್ಚುವಲ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಯುಪಿಯ ಅಭಿವೃದ್ಧಿ ನಿಂತ ನೀರಾಗಿತ್ತು. ಆದರೆ ನಕಲಿ ಸಮಾಜವಾದಿಗಳು ಮತ್ತು ಅವರ ಆಪ್ತರಲ್ಲಿ ಸಂಪತ್ತು ವೃದ್ಧಿಯಾಗಿತ್ತು. ಅವರಿಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಏನು ಸಂಬಂಧವೇ ಇಲ್ಲ ಎನ್ನುವಂತೆ ಅವರು ಇದ್ದರು” ಎಂದಿದ್ದಾರೆ.
“ಬಿಜೆಪಿಯಲ್ಲಿ ಸಹೋದರ, ಅಳಿಯ ರಾಜಕಾರಣಕ್ಕೆ ಆಸ್ಪದ ಇಲ್ಲ. ನಾವು ಮನೆ ಕೊಟ್ಟಾಗ ಜನರ ಜಾತಿ, ಧರ್ಮ ಕೇಳುವುದಿಲ್ಲ. ಮಹಿಳೆಯರಿಗೆ ಗ್ಯಾಸ್ ಸಂಪರ್ಕ ನೀಡುವಾಗ ಅವರ ಧರ್ಮ ಕೇಳುವುದಿಲ್ಲ. ಯುಪಿಯ ರೈತರಿಗೆ ಧನ ಸಹಾಯ ನೀಡುವಾಗ ಅವರ ರಾಜಕೀಯ ಒಲವಿನ ಬಗ್ಗೆ ವಿಚಾರಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತೀಯ ಸಮಾಜದ ಎಲ್ಲಾ ವರ್ಗಗಳ ಸರ್ವಾಂಗೀಣ ಬೆಳವಣಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. “ಮುಂದಿನ 25 ವರ್ಷಗಳಲ್ಲಿ, ರಾಷ್ಟ್ರವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸುವಾಗ ಯುಪಿ ತನ್ನ ಅಭಿವೃದ್ಧಿಯ ಹೊಸ ಛಾಪು ಮೂಡಿಸುತ್ತದೆ. ನಮ್ಮ ಸರ್ಕಾರವು ಇಲ್ಲಿನ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರೈತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.