ನವದೆಹಲಿ: ನಾವು ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ ಕಾಂಗ್ರೆಸ್ನ ಚಿಂತನೆಯನ್ನು ನಗರ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಕಾಂಗ್ರೆಸ್ ಇಲ್ಲದೇ ಇರುತ್ತಿದ್ದರೆ ಭಾರತವು ತುರ್ತು ಪರಿಸ್ಥಿತಿ, ಭ್ರಷ್ಟಾಚಾರ, ಸಿಖ್ ಹತ್ಯಾಕಾಂಡದಿಂದ ಮುಕ್ತವಾಗುತ್ತಿತ್ತು, ಕಾಶ್ಮೀರಿ ಪಂಡಿತರ ಪಲಾಯಣ ನಡೆಯುತ್ತಿರಲಿಲ್ಲ, ಹೆಣ್ಣುಮಕ್ಕಳು ಸುರಕ್ಷಿತವಾಗಿರುತ್ತಿದ್ದರು, ಜನರು ಮೂಲಭೂತ ಸೌಕರ್ಯಗಳನ್ನು ಪಡೆಯುತ್ತಿದ್ದರು” ಎಂದಿದ್ದಾರೆ.
“ಭಾರತಕ್ಕೆ ದೊಡ್ಡ ಅಪಾಯವೆಂದರೆ ಕುಟುಂಬ ರಾಜಕೀಯ. ಸಂಘಟನೆಯೊಳಗೆ ಪ್ರಜಾಪ್ರಭುತ್ವಕ್ಕೆ ಜಾಗ ನೀಡಬೇಕು ಎಂದು ನಾನು ಕಾಂಗ್ರೆಸ್ಗೆ ಒತ್ತಾಯಿಸುತ್ತೇನೆ” ಎಂದಿದ್ದಾರೆ.
ಔಷಧ ವಲಯದಲ್ಲಿ ಭಾರತದ ಸಾಧನೆಯ ಬಗ್ಗೆ ಮಾತನಾಡಿದ ಮೋದಿ, ಭಾರತದ ಸಾಂಪ್ರದಾಯಿಕ ಔಷಧಗಳು ವಿದೇಶಗಳಲ್ಲಿ ಗುರುತಿಸಿಕೊಳ್ಳುತ್ತಿವೆ. ಆಯುಷ್ ಸಚಿವಾಲಯದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದಿದ್ದಾರೆ.
ಭಾರತದ ಆರ್ಥಿಕ ಬೆಳವಣಿಗೆ ಮಾತನಾಡಿದ ಅವರು, ಯುಎಸ್ 40 ವರ್ಷಗಳಲ್ಲಿ ಅತ್ಯಂತ ಕೆಟ್ಟ ಹಣದುಬ್ಬರವನ್ನು ಎದುರಿಸುತ್ತಿದೆ. ಯುಕೆ 30 ವರ್ಷಗಳಲ್ಲಿ ಅತ್ಯಂತ ಕೆಟ್ಟ ಹಣದುಬ್ಬರವನ್ನು ಎದುರಿಸುತ್ತಿದೆ. ಅನೇಕ ಯುರೋಪಿಯನ್ ರಾಷ್ಟ್ರಗಳಲ್ಲಿ ಇದೇ ಸ್ಥಿತಿ ಇದೆ. ಭಾರತದಲ್ಲಿ, ನಾವು ಹಣದುಬ್ಬರವನ್ನು 4% ಮತ್ತು 5% (CPI) ನಡುವೆ ಇರಿಸಿದ್ದೇವೆ. ಯುಪಿಎ ಆಡಳಿತದಲ್ಲಿ ಹಣದುಬ್ಬರ ಎರಡಂಕಿ ಮುಟ್ಟಿತ್ತು. ಹೆಚ್ಚಿನ ಬೆಳವಣಿಗೆ ಮತ್ತು ಕಡಿಮೆ ಹಣದುಬ್ಬರ ಹೊಂದಿರುವ ಏಕೈಕ ದೊಡ್ಡ ರಾಷ್ಟ್ರ ನಮ್ಮದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.