ನವದೆಹಲಿ: ಕಳೆದ 12 ವರ್ಷಗಳಲ್ಲಿ ಎಡಪಂಥೀಯ ಉಗ್ರಗಾಮಿ ಹಿಂಸಾಚಾರ ಘಟನೆಗಳು 77 ಪ್ರತಿಶತದಷ್ಟು ಕಡಿಮೆಯಾಗಿದೆ. 2009 ರಲ್ಲಿ ದೇಶದಲ್ಲಿ ಎಡಪಂಥೀಯ ಉಗ್ರಗಾಮಿ ಹಿಂಸಾಚಾರದ ಒಟ್ಟು 2,258 ಘಟನೆಗಳು ವರದಿಯಾಗಿದ್ದು, ಇದು 2021 ರಲ್ಲಿ 509 ಕ್ಕೆ ಇಳಿದಿದೆ.
ಇಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು, ಎಡಪಂಥೀಯ ಹಿಂಸಾಚಾರದಿಂದಾಗಿ ನಾಗರಿಕರು ಮತ್ತು ಭದ್ರತಾ ಪಡೆಗಳ ಸಾವುಗಳು 2010 ರಲ್ಲಿ ಸಾರ್ವಕಾಲಿಕ ಗರಿಷ್ಠ 1000ದಿಂದ 85 ಪ್ರತಿಶತದಷ್ಟು ಕಡಿಮೆಯಾಗಿದೆ. 2021 ರಲ್ಲಿ 509 ಕ್ಕೆ ಇಳಿದಿದೆ.
ಎಡಪಂಥೀಯ ಹಿಂಸಾಚಾರದ ಭೌಗೋಳಿಕ ಹರಡುವಿಕೆ ಕಡಿಮೆಯಾಗಿದೆ ಮತ್ತು 2010 ರಲ್ಲಿ 96 ಜಿಲ್ಲೆಗಳಿಗೆ ಹೋಲಿಸಿದರೆ 2021 ರಲ್ಲಿ ಕೇವಲ 46 ಜಿಲ್ಲೆಗಳು ಮಾತ್ರ ನಕ್ಸಲ್ ಪ್ರಭಾವ ಎದುರಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಎಡಪಂಥೀಯ ಹಿಂಸಾಚಾರವನ್ನು ತಡೆಯಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ. ರಸ್ತೆ ಜಾಲದ ವಿಸ್ತರಣೆ, ದೂರಸಂಪರ್ಕ ಸಂಪರ್ಕ ಸುಧಾರಣೆ, ಕೌಶಲ್ಯ ಅಭಿವೃದ್ಧಿ, ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಆರ್ಥಿಕ ಸೇರ್ಪಡೆ ಕುರಿತು ವಿಶೇಷ ಗಮನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.